ಬಂಟ್ವಾಳ: ಸ್ಕೂಟರ್ ಸವಾರನಿಗೆ ರಿಕ್ಷಾ ಡಿಕ್ಕಿಯಾಗಿ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಾವೂರ ಗ್ರಾಮದ ಪೂಪಾಡಿಕಟ್ಟೆ ಎಂಬಲ್ಲಿ ನಡೆದಿದೆ.
ಪ್ರವೀಣ್ ಶೆಟ್ಟಿ (41) ಗಾಯಗೊಂಡ ಸ್ಕೂಟರ್ ಸವಾರ. ಪ್ರವೀಣ್ ಅವರು ಬಂಟ್ವಾಳದಿಂದ ಸರಪಾಡಿಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವೇಳೆ ನಾವೂರ ಸಮೀಪದ ಪೂಪಾಡಿಕಟ್ಟೆ ಎಂಬಲ್ಲಿ ಎದುರು ಕಡೆ ಅಂದರೆ ಸರಪಾಡಿ ಕಡೆಯಿಂದ ಬರುತ್ತಿದ್ದ ರಿಕ್ಷಾವೊಂದು ನೇರವಾಗಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಬಿದ್ದು ಗಾಯವಾಗಿದೆ. ಗಾಯಗೊಂಡ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಟೋ ರಿಕ್ಷಾ ಚಾಲಕ ಮುಸ್ತಾಫನ ನಿರ್ಲಕ್ಷ್ಯತನದ ಚಾಲನೆ ಅಪಘಾತಕ್ಕೆ ಕಾರಣವಾಗಿದೆ ಎಂದು ಪ್ರವೀಣ್ ಅವರ ಸಹೋದರ ಠಾಣೆಗೆ ದೂರು ನೀಡಿದ್ದಾರೆ. ಟ್ರಾಫಿಕ್ ಪೋಲೀಸ್ ಠಾಣೆಯ ಲ್ಲಿ ಬಗ್ಗೆ ದೂರು ದಾಖಲಾಗಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…