ಜನ ಮನದ ನಾಡಿ ಮಿಡಿತ

Advertisement

ಮಾನಸಿಕ ಖಿನ್ನತೆ: ಮಹಿಳೆ ಆತ್ಮಹತ್ಯೆ

ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ನಾಡ್ ಬೈಪಾಸ್ ಬಳಿ ಮಹಿಳೆಯೊಬ್ಬರು ಪಕ್ಕದ ಮನೆಯ ಬಾವಿಗೆ ಹಾರಿ ಗುರುವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಮೃತ ಮಹಿಳೆಯನ್ನು ಕಾರ್ನಾಡ್ ಬೈಪಾಸ್ ಬಳಿಯ ನಿವಾಸಿ ಲಿನೆಟ್ ರಂಜಿತಾ ಸೋನ್ಸ್(34) ಎಂದು ಗುರುತಿಸಲಾಗಿದೆ.

ಮೃತ ಮಹಿಳೆ ಲಿನೆಟ್ ರಂಜಿತಾ ಸೋನ್ಸ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಕೆ.ಎಂ.ಸಿ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ರಂಜಿತಾರವರು ಕೊರೊನಾ ಬಳಿಕ ಕೆಲಸದಿಂದ ನಿವೃತ್ತಿ ಪಡೆದಿದ್ದರು.


ಗುರುವಾರ ಬೆಳಿಗ್ಗೆ ಪಕ್ಕದ ಸಂಬಂಧಿಕರ ಮನೆಗೆ ತೆರಳಿದ್ದ ಅವರು ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ಮನೆಗೆ ವಾಪಸಾಗಿದ್ದರು. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಪತಿ ಜೀವನ್ ರವರು ಅಕ್ಟೋಬರ್ ಒಂದರಂದು ವಾಪಸಾಗಿದ್ದು ಘಟನೆ ಸಂದರ್ಭ ಮನೆಯಲ್ಲಿದ್ದರು. ಮನೆಯವರು ರಂಜಿತಾರನ್ನು ಸಮಾಧಾನ ಪಡಿಸುತ್ತಿದ್ದಾಗಲೇ ಏಕಾಏಕಿ ಮನೆ ಹೊರಗಡೆ ಓಡಿಹೋಗಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಬಾವಿಗೆ ಹಾರಿದ್ದರು. ಹಿಂದೆಯೇ ಓಡಿಹೋದ ಪತಿ ಜೀವನ್ ಕೊನೇ ಕ್ಷಣದಲ್ಲಿ ರಕ್ಷಿಸುವ ಪ್ರಯತ್ನ ನಡೆಸಿದರೂ ಫಲಕಾರಿಯಾಗಲಿಲ್ಲ.


ತಕ್ಷಣ ಕದ್ರಿ ಅಗ್ನಿಶಾಮಕ ದಳಕ್ಕೆ ಕರೆಸಿ ಪರಿಶಿಲಿಸಿದಾಗ ಫಲಕಾರಿಯಾಗದೆ ಮೃತಪಟ್ಟಿದ್ದರು. 65 ಅಡಿ ಆಳದ ಬಾವಿಯಲ್ಲಿ ಸುಮಾರು 23 ಅಡಿ ನೀರಿತ್ತು. ವಿವಿಧ ಪ್ರಯತ್ನ ನಡೆಸಿದರೂ ಆಕೆಯ ಶವ ಮೇಲೆತ್ತಲು ಅಸಾಧ್ಯವಾಗಿ ಅಗ್ನಿಶಾಮಕ ದಳದ ಸುರೇಶ್ ಶೆಟ್ಟ ಎಂಬವರು ಬಾವಿಗಿಳಿದು ನೀರಿನಲ್ಲಿ ಮುಳುಗಿ ಸುಮಾರು ಒಂದು ಗಂಟೆ ಹುಡುಕಾಡಿದ ಬಳಿಕ ಬಾವಿ ಅಡಿಭಾಗದಲ್ಲಿ ರಂಜಿತಾ ಶವ ಪತ್ತೆಯಾಗಿತ್ತು. ಈತನ್ಮಧ್ಯೆ ಮುಳುಗು ತಜ್ಞ ಈಶ್ವರ್ ಮಲ್ಪೆಯವರಿಗೆ ಕರೆ ಮಾಡಿ ಕರೆಸಲಾಗಿತ್ತು. ಅವರು ಉಚ್ಚಿಲ ತಲುಪುವಷ್ಟರಲ್ಲಿ ಸುರೇಶ್ ಶೆಟ್ಟಿಯವರು ಶವವನ್ನು ಮೇಲಕ್ಕೆತ್ತಿದ್ದರು.


ಕಾಪು ಪಾಂಗಾಳ ಉಳಿಯಾರಗೋಳಿ ಡೇವಿಡ್ ಸೋನ್ಸ್ರವರ ಪುತ್ರಿಯಾಗಿರುವ ರಂಜಿತಾರವರು ಪತಿಯ ಮನೆಯಲ್ಲಿ ಅತ್ತೆ ಮಾವನ ಜತೆ ವಾಸವಿದ್ದರು. ಸದಾ ಏಕಾಂತ ಬಯಸುವ ಅವರು ಯಾರೊಂದಿಗೂ ಹೆಚ್ಚಾಗಿ ಬೆರೆಯುತ್ತಿರಲಿಲ್ಲ. ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!