ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ನಾಡ್ ಬೈಪಾಸ್ ಬಳಿ ಮಹಿಳೆಯೊಬ್ಬರು ಪಕ್ಕದ ಮನೆಯ ಬಾವಿಗೆ ಹಾರಿ ಗುರುವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ಮಹಿಳೆಯನ್ನು ಕಾರ್ನಾಡ್ ಬೈಪಾಸ್ ಬಳಿಯ ನಿವಾಸಿ ಲಿನೆಟ್ ರಂಜಿತಾ ಸೋನ್ಸ್(34) ಎಂದು ಗುರುತಿಸಲಾಗಿದೆ.
ಮೃತ ಮಹಿಳೆ ಲಿನೆಟ್ ರಂಜಿತಾ ಸೋನ್ಸ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಕೆ.ಎಂ.ಸಿ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ರಂಜಿತಾರವರು ಕೊರೊನಾ ಬಳಿಕ ಕೆಲಸದಿಂದ ನಿವೃತ್ತಿ ಪಡೆದಿದ್ದರು.
ಗುರುವಾರ ಬೆಳಿಗ್ಗೆ ಪಕ್ಕದ ಸಂಬಂಧಿಕರ ಮನೆಗೆ ತೆರಳಿದ್ದ ಅವರು ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ಮನೆಗೆ ವಾಪಸಾಗಿದ್ದರು. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಪತಿ ಜೀವನ್ ರವರು ಅಕ್ಟೋಬರ್ ಒಂದರಂದು ವಾಪಸಾಗಿದ್ದು ಘಟನೆ ಸಂದರ್ಭ ಮನೆಯಲ್ಲಿದ್ದರು. ಮನೆಯವರು ರಂಜಿತಾರನ್ನು ಸಮಾಧಾನ ಪಡಿಸುತ್ತಿದ್ದಾಗಲೇ ಏಕಾಏಕಿ ಮನೆ ಹೊರಗಡೆ ಓಡಿಹೋಗಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಬಾವಿಗೆ ಹಾರಿದ್ದರು. ಹಿಂದೆಯೇ ಓಡಿಹೋದ ಪತಿ ಜೀವನ್ ಕೊನೇ ಕ್ಷಣದಲ್ಲಿ ರಕ್ಷಿಸುವ ಪ್ರಯತ್ನ ನಡೆಸಿದರೂ ಫಲಕಾರಿಯಾಗಲಿಲ್ಲ.
ತಕ್ಷಣ ಕದ್ರಿ ಅಗ್ನಿಶಾಮಕ ದಳಕ್ಕೆ ಕರೆಸಿ ಪರಿಶಿಲಿಸಿದಾಗ ಫಲಕಾರಿಯಾಗದೆ ಮೃತಪಟ್ಟಿದ್ದರು. 65 ಅಡಿ ಆಳದ ಬಾವಿಯಲ್ಲಿ ಸುಮಾರು 23 ಅಡಿ ನೀರಿತ್ತು. ವಿವಿಧ ಪ್ರಯತ್ನ ನಡೆಸಿದರೂ ಆಕೆಯ ಶವ ಮೇಲೆತ್ತಲು ಅಸಾಧ್ಯವಾಗಿ ಅಗ್ನಿಶಾಮಕ ದಳದ ಸುರೇಶ್ ಶೆಟ್ಟ ಎಂಬವರು ಬಾವಿಗಿಳಿದು ನೀರಿನಲ್ಲಿ ಮುಳುಗಿ ಸುಮಾರು ಒಂದು ಗಂಟೆ ಹುಡುಕಾಡಿದ ಬಳಿಕ ಬಾವಿ ಅಡಿಭಾಗದಲ್ಲಿ ರಂಜಿತಾ ಶವ ಪತ್ತೆಯಾಗಿತ್ತು. ಈತನ್ಮಧ್ಯೆ ಮುಳುಗು ತಜ್ಞ ಈಶ್ವರ್ ಮಲ್ಪೆಯವರಿಗೆ ಕರೆ ಮಾಡಿ ಕರೆಸಲಾಗಿತ್ತು. ಅವರು ಉಚ್ಚಿಲ ತಲುಪುವಷ್ಟರಲ್ಲಿ ಸುರೇಶ್ ಶೆಟ್ಟಿಯವರು ಶವವನ್ನು ಮೇಲಕ್ಕೆತ್ತಿದ್ದರು.
ಕಾಪು ಪಾಂಗಾಳ ಉಳಿಯಾರಗೋಳಿ ಡೇವಿಡ್ ಸೋನ್ಸ್ರವರ ಪುತ್ರಿಯಾಗಿರುವ ರಂಜಿತಾರವರು ಪತಿಯ ಮನೆಯಲ್ಲಿ ಅತ್ತೆ ಮಾವನ ಜತೆ ವಾಸವಿದ್ದರು. ಸದಾ ಏಕಾಂತ ಬಯಸುವ ಅವರು ಯಾರೊಂದಿಗೂ ಹೆಚ್ಚಾಗಿ ಬೆರೆಯುತ್ತಿರಲಿಲ್ಲ. ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…