ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ನಾಡ್ ಬೈಪಾಸ್ ಬಳಿ ಮಹಿಳೆಯೊಬ್ಬರು ಪಕ್ಕದ ಮನೆಯ ಬಾವಿಗೆ ಹಾರಿ ಗುರುವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ಮಹಿಳೆಯನ್ನು ಕಾರ್ನಾಡ್ ಬೈಪಾಸ್ ಬಳಿಯ ನಿವಾಸಿ ಲಿನೆಟ್ ರಂಜಿತಾ ಸೋನ್ಸ್(34) ಎಂದು ಗುರುತಿಸಲಾಗಿದೆ.
ಮೃತ ಮಹಿಳೆ ಲಿನೆಟ್ ರಂಜಿತಾ ಸೋನ್ಸ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಕೆ.ಎಂ.ಸಿ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ರಂಜಿತಾರವರು ಕೊರೊನಾ ಬಳಿಕ ಕೆಲಸದಿಂದ ನಿವೃತ್ತಿ ಪಡೆದಿದ್ದರು.
ಗುರುವಾರ ಬೆಳಿಗ್ಗೆ ಪಕ್ಕದ ಸಂಬಂಧಿಕರ ಮನೆಗೆ ತೆರಳಿದ್ದ ಅವರು ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ಮನೆಗೆ ವಾಪಸಾಗಿದ್ದರು. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಪತಿ ಜೀವನ್ ರವರು ಅಕ್ಟೋಬರ್ ಒಂದರಂದು ವಾಪಸಾಗಿದ್ದು ಘಟನೆ ಸಂದರ್ಭ ಮನೆಯಲ್ಲಿದ್ದರು. ಮನೆಯವರು ರಂಜಿತಾರನ್ನು ಸಮಾಧಾನ ಪಡಿಸುತ್ತಿದ್ದಾಗಲೇ ಏಕಾಏಕಿ ಮನೆ ಹೊರಗಡೆ ಓಡಿಹೋಗಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಬಾವಿಗೆ ಹಾರಿದ್ದರು. ಹಿಂದೆಯೇ ಓಡಿಹೋದ ಪತಿ ಜೀವನ್ ಕೊನೇ ಕ್ಷಣದಲ್ಲಿ ರಕ್ಷಿಸುವ ಪ್ರಯತ್ನ ನಡೆಸಿದರೂ ಫಲಕಾರಿಯಾಗಲಿಲ್ಲ.
ತಕ್ಷಣ ಕದ್ರಿ ಅಗ್ನಿಶಾಮಕ ದಳಕ್ಕೆ ಕರೆಸಿ ಪರಿಶಿಲಿಸಿದಾಗ ಫಲಕಾರಿಯಾಗದೆ ಮೃತಪಟ್ಟಿದ್ದರು. 65 ಅಡಿ ಆಳದ ಬಾವಿಯಲ್ಲಿ ಸುಮಾರು 23 ಅಡಿ ನೀರಿತ್ತು. ವಿವಿಧ ಪ್ರಯತ್ನ ನಡೆಸಿದರೂ ಆಕೆಯ ಶವ ಮೇಲೆತ್ತಲು ಅಸಾಧ್ಯವಾಗಿ ಅಗ್ನಿಶಾಮಕ ದಳದ ಸುರೇಶ್ ಶೆಟ್ಟ ಎಂಬವರು ಬಾವಿಗಿಳಿದು ನೀರಿನಲ್ಲಿ ಮುಳುಗಿ ಸುಮಾರು ಒಂದು ಗಂಟೆ ಹುಡುಕಾಡಿದ ಬಳಿಕ ಬಾವಿ ಅಡಿಭಾಗದಲ್ಲಿ ರಂಜಿತಾ ಶವ ಪತ್ತೆಯಾಗಿತ್ತು. ಈತನ್ಮಧ್ಯೆ ಮುಳುಗು ತಜ್ಞ ಈಶ್ವರ್ ಮಲ್ಪೆಯವರಿಗೆ ಕರೆ ಮಾಡಿ ಕರೆಸಲಾಗಿತ್ತು. ಅವರು ಉಚ್ಚಿಲ ತಲುಪುವಷ್ಟರಲ್ಲಿ ಸುರೇಶ್ ಶೆಟ್ಟಿಯವರು ಶವವನ್ನು ಮೇಲಕ್ಕೆತ್ತಿದ್ದರು.
ಕಾಪು ಪಾಂಗಾಳ ಉಳಿಯಾರಗೋಳಿ ಡೇವಿಡ್ ಸೋನ್ಸ್ರವರ ಪುತ್ರಿಯಾಗಿರುವ ರಂಜಿತಾರವರು ಪತಿಯ ಮನೆಯಲ್ಲಿ ಅತ್ತೆ ಮಾವನ ಜತೆ ವಾಸವಿದ್ದರು. ಸದಾ ಏಕಾಂತ ಬಯಸುವ ಅವರು ಯಾರೊಂದಿಗೂ ಹೆಚ್ಚಾಗಿ ಬೆರೆಯುತ್ತಿರಲಿಲ್ಲ. ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…