ಉಡುಪಿ; ಮುದ್ರಾಡಿ ನಮ ತುಳುವೆರ್ ಕಲಾ ಸಂಘಟನೆ ಆಶ್ರಯದಲ್ಲಿ 23ನೇ ವರ್ಷದ ನವರಂಗೋತ್ಸವ ಹಾಗೂ ಚಿಣ್ಣರ ಯಕ್ಷಾಂಗಣ ಇದೇ ಬರುವ ಅ.15 ರಿಂದ 23ರ ವರೆಗೆ ನಾಟ್ಕದೂರು ಬಿ.ವಿ ಕಾರಂತ ಬಯಲು ರಂಗ ಮಂದಿರದಲ್ಲಿ ನಡೆಯಲಿದೆ ಎಂದು ನಮ ತುಳುವೆರ್ ಕಲಾ ಸಂಘಟನೆ ಅಧ್ಯಕ್ಷ ಸುಕುಮಾರ್ ಮೋಹನ್ ಹೇಳಿದ್ದಾರೆ.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 15ರಂದು ಸಂಜೆ 7 ಗಂಟೆಗೆ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ಕಾರ್ಯಕ್ರಮವನ್ನ ಉದ್ಘಾಟಿಸಲಿದ್ದಾರೆ. ಶಾಸಕ ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ವಾಸ್ತುತಜ್ಞ ಪ್ರಮಲ್ ಕುಮಾರ್, ಮುದ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಸಂತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅಭಿಮತ ಟಿವಿಯ ಮುಖ್ಯಸ್ಥೆ ಡಾ.ಮಮತಾ ಪಿ. ಶೆಟ್ಟಿ, ಉದ್ಯಮಿ ಪ್ರಸಾದ್ ಕಾಂಚನ್, ಬೆಳಗಾವಿಯ ರವಿ ಕೋಟೆಯರಗಸ್ತಿ, ಡಾ. ಸರಜು ಕಾಡ್ಕರ್, ಹರೀಶ್ ಸಾಲಿಯಾನ್ ಬಜೆಗೋಳಿ, ಪ್ರಸಾದ್ ಆಚಾರ್ಯ ಬಜೆಗೋಳಿ, ಸುಂದರ ಕುಮಾರ್ ಮುಂಬೈ ಅವರಿಗೆ ಕರ್ನಾಟಕ ನಾಡಪೋಷಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಅಂತ ಮಾಹಿತಿ ನೀಡಿದ್ದಾರೆ.
ಇನ್ನೂ ಅ.23ರಂದು ಸಂಜೆ 7ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ರಂಗನಿರ್ದೇಶಕ ರಾಮ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಥ್ವಿನ್ ಅಜೆಕಾರು ಅವರಿಗೆ ಬಿ.ವಿ ಕಾರಂತ ಯುವ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಅಂತ ಹೇಳಿದ್ರು. ಈ ಸಂದರ್ಭದಲ್ಲಿ ಸಂಘಟನೆ ಸದಸ್ಯರಾದ ಉಮೇಶ್
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…