ಉಡುಪಿ; ಮುದ್ರಾಡಿ ನಮ ತುಳುವೆರ್ ಕಲಾ ಸಂಘಟನೆ ಆಶ್ರಯದಲ್ಲಿ 23ನೇ ವರ್ಷದ ನವರಂಗೋತ್ಸವ ಹಾಗೂ ಚಿಣ್ಣರ ಯಕ್ಷಾಂಗಣ ಇದೇ ಬರುವ ಅ.15 ರಿಂದ 23ರ ವರೆಗೆ ನಾಟ್ಕದೂರು ಬಿ.ವಿ ಕಾರಂತ ಬಯಲು ರಂಗ ಮಂದಿರದಲ್ಲಿ ನಡೆಯಲಿದೆ ಎಂದು ನಮ ತುಳುವೆರ್ ಕಲಾ ಸಂಘಟನೆ ಅಧ್ಯಕ್ಷ ಸುಕುಮಾರ್ ಮೋಹನ್ ಹೇಳಿದ್ದಾರೆ.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 15ರಂದು ಸಂಜೆ 7 ಗಂಟೆಗೆ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ಕಾರ್ಯಕ್ರಮವನ್ನ ಉದ್ಘಾಟಿಸಲಿದ್ದಾರೆ. ಶಾಸಕ ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ವಾಸ್ತುತಜ್ಞ ಪ್ರಮಲ್ ಕುಮಾರ್, ಮುದ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಸಂತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅಭಿಮತ ಟಿವಿಯ ಮುಖ್ಯಸ್ಥೆ ಡಾ.ಮಮತಾ ಪಿ. ಶೆಟ್ಟಿ, ಉದ್ಯಮಿ ಪ್ರಸಾದ್ ಕಾಂಚನ್, ಬೆಳಗಾವಿಯ ರವಿ ಕೋಟೆಯರಗಸ್ತಿ, ಡಾ. ಸರಜು ಕಾಡ್ಕರ್, ಹರೀಶ್ ಸಾಲಿಯಾನ್ ಬಜೆಗೋಳಿ, ಪ್ರಸಾದ್ ಆಚಾರ್ಯ ಬಜೆಗೋಳಿ, ಸುಂದರ ಕುಮಾರ್ ಮುಂಬೈ ಅವರಿಗೆ ಕರ್ನಾಟಕ ನಾಡಪೋಷಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಅಂತ ಮಾಹಿತಿ ನೀಡಿದ್ದಾರೆ.
ಇನ್ನೂ ಅ.23ರಂದು ಸಂಜೆ 7ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ರಂಗನಿರ್ದೇಶಕ ರಾಮ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಥ್ವಿನ್ ಅಜೆಕಾರು ಅವರಿಗೆ ಬಿ.ವಿ ಕಾರಂತ ಯುವ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಅಂತ ಹೇಳಿದ್ರು. ಈ ಸಂದರ್ಭದಲ್ಲಿ ಸಂಘಟನೆ ಸದಸ್ಯರಾದ ಉಮೇಶ್
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…