ಜನ ಮನದ ನಾಡಿ ಮಿಡಿತ

Advertisement

ಪದವಿ ವಿದ್ಯಾರ್ಥಿಗಳಿಗೂ ದಸರಾ ರಜೆ ನೀಡಿ; ಶಾಸಕ ವೇದವ್ಯಾಸ್ ಕಾಮತ್ ಸರ್ಕಾರಕ್ಕೆ ಆಗ್ರಹ

ಮಂಗಳೂರಿನಲ್ಲಿ ಈಗಾಗಲೇ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದ್ದು ಪದವಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸದಿರುವುದು ಹಬ್ಬದ ಸಂಭ್ರಮ ಸವಿಯಲು ಅಡ್ಡಿಯಾಗಿದೆ. ನಾಡಿನ ಪ್ರಮುಖ ಹಬ್ಬ ದಸರಾಗೆ ಪೂರಕವಾಗುವಂತೆ ಪದವಿ ವಿದ್ಯಾರ್ಥಿಗಳಿಗೂ ರಜೆ ನೀಡುವ ಬಗ್ಗೆ ಹಲವಾರು ಪೋಷಕರು ಈಗಾಗಲೇ ಮನವಿ ಮಾಡುತ್ತಿದ್ದು ಸರಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಗ್ರಹಿಸಿದರು.

ದಸರಾವು ನಾಡಿನ ಅತ್ಯಂತ ಪ್ರಮುಖ ಹಬ್ಬವಾಗಿದ್ದು ಮಂಗಳೂರು ದಸರಾವು ಮೈಸೂರು ನಂತರ ಅತ್ಯಂತ ಜನಾಕರ್ಷಣೆ ಗಳಿಸಿರುವ ಹಬ್ಬವಾಗಿದೆ. ಹೀಗಾಗಿ ನವರಾತ್ರಿಯನ್ನು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು, ಸೇರಿದಂತೆ ಎಲ್ಲರೂ ಸಂಭ್ರಮದಿಂದ ಆಚರಿಸುವಂತಾಗಲು ರಜೆ ನೀಡುವ ಬಗ್ಗೆ ಆದೇಶ ಹೊರಡಿಸಬೇಕೆಂದು ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳ ಮೂಲಕ ಸರ್ಕಾರವನ್ನು ಆಗ್ರಹಿಸಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿ ದಸರಾ ಹಬ್ಬದ ರಜೆಯಲ್ಲಿ ಉಂಟಾಗಿದ್ದ ವ್ಯತ್ಯಾಸವನ್ನು ಸರ್ಕಾರದ ಮಟ್ಟದಲ್ಲಿಯೇ ಮಾರ್ಪಾಡುಗೊಳಿಸುವಲ್ಲಿ
ಶಾಸಕ ವೇದವ್ಯಾಸ್ ಕಾಮತ್ ಅವರು ಯಶಸ್ವಿಯಾಗಿದ್ದನ್ನು ಸ್ಮರಿಸಬಹುದು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!