ಜನ ಮನದ ನಾಡಿ ಮಿಡಿತ

Advertisement

ಪದವಿ ವಿದ್ಯಾರ್ಥಿಗಳಿಗೂ ದಸರಾ ರಜೆ ನೀಡಿ; ಶಾಸಕ ವೇದವ್ಯಾಸ್ ಕಾಮತ್ ಸರ್ಕಾರಕ್ಕೆ ಆಗ್ರಹ

ಮಂಗಳೂರಿನಲ್ಲಿ ಈಗಾಗಲೇ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದ್ದು ಪದವಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸದಿರುವುದು ಹಬ್ಬದ ಸಂಭ್ರಮ ಸವಿಯಲು ಅಡ್ಡಿಯಾಗಿದೆ. ನಾಡಿನ ಪ್ರಮುಖ ಹಬ್ಬ ದಸರಾಗೆ ಪೂರಕವಾಗುವಂತೆ ಪದವಿ ವಿದ್ಯಾರ್ಥಿಗಳಿಗೂ ರಜೆ ನೀಡುವ ಬಗ್ಗೆ ಹಲವಾರು ಪೋಷಕರು ಈಗಾಗಲೇ ಮನವಿ ಮಾಡುತ್ತಿದ್ದು ಸರಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಗ್ರಹಿಸಿದರು.

ದಸರಾವು ನಾಡಿನ ಅತ್ಯಂತ ಪ್ರಮುಖ ಹಬ್ಬವಾಗಿದ್ದು ಮಂಗಳೂರು ದಸರಾವು ಮೈಸೂರು ನಂತರ ಅತ್ಯಂತ ಜನಾಕರ್ಷಣೆ ಗಳಿಸಿರುವ ಹಬ್ಬವಾಗಿದೆ. ಹೀಗಾಗಿ ನವರಾತ್ರಿಯನ್ನು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು, ಸೇರಿದಂತೆ ಎಲ್ಲರೂ ಸಂಭ್ರಮದಿಂದ ಆಚರಿಸುವಂತಾಗಲು ರಜೆ ನೀಡುವ ಬಗ್ಗೆ ಆದೇಶ ಹೊರಡಿಸಬೇಕೆಂದು ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳ ಮೂಲಕ ಸರ್ಕಾರವನ್ನು ಆಗ್ರಹಿಸಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿ ದಸರಾ ಹಬ್ಬದ ರಜೆಯಲ್ಲಿ ಉಂಟಾಗಿದ್ದ ವ್ಯತ್ಯಾಸವನ್ನು ಸರ್ಕಾರದ ಮಟ್ಟದಲ್ಲಿಯೇ ಮಾರ್ಪಾಡುಗೊಳಿಸುವಲ್ಲಿ
ಶಾಸಕ ವೇದವ್ಯಾಸ್ ಕಾಮತ್ ಅವರು ಯಶಸ್ವಿಯಾಗಿದ್ದನ್ನು ಸ್ಮರಿಸಬಹುದು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!