ಮಂಗಳೂರಿನಲ್ಲಿ ಈಗಾಗಲೇ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದ್ದು ಪದವಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸದಿರುವುದು ಹಬ್ಬದ ಸಂಭ್ರಮ ಸವಿಯಲು ಅಡ್ಡಿಯಾಗಿದೆ. ನಾಡಿನ ಪ್ರಮುಖ ಹಬ್ಬ ದಸರಾಗೆ ಪೂರಕವಾಗುವಂತೆ ಪದವಿ ವಿದ್ಯಾರ್ಥಿಗಳಿಗೂ ರಜೆ ನೀಡುವ ಬಗ್ಗೆ ಹಲವಾರು ಪೋಷಕರು ಈಗಾಗಲೇ ಮನವಿ ಮಾಡುತ್ತಿದ್ದು ಸರಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಗ್ರಹಿಸಿದರು.
ದಸರಾವು ನಾಡಿನ ಅತ್ಯಂತ ಪ್ರಮುಖ ಹಬ್ಬವಾಗಿದ್ದು ಮಂಗಳೂರು ದಸರಾವು ಮೈಸೂರು ನಂತರ ಅತ್ಯಂತ ಜನಾಕರ್ಷಣೆ ಗಳಿಸಿರುವ ಹಬ್ಬವಾಗಿದೆ. ಹೀಗಾಗಿ ನವರಾತ್ರಿಯನ್ನು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು, ಸೇರಿದಂತೆ ಎಲ್ಲರೂ ಸಂಭ್ರಮದಿಂದ ಆಚರಿಸುವಂತಾಗಲು ರಜೆ ನೀಡುವ ಬಗ್ಗೆ ಆದೇಶ ಹೊರಡಿಸಬೇಕೆಂದು ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳ ಮೂಲಕ ಸರ್ಕಾರವನ್ನು ಆಗ್ರಹಿಸಿದರು.
ಹಿಂದಿನ ಸರ್ಕಾರದ ಅವಧಿಯಲ್ಲಿ ದಸರಾ ಹಬ್ಬದ ರಜೆಯಲ್ಲಿ ಉಂಟಾಗಿದ್ದ ವ್ಯತ್ಯಾಸವನ್ನು ಸರ್ಕಾರದ ಮಟ್ಟದಲ್ಲಿಯೇ ಮಾರ್ಪಾಡುಗೊಳಿಸುವಲ್ಲಿ
ಶಾಸಕ ವೇದವ್ಯಾಸ್ ಕಾಮತ್ ಅವರು ಯಶಸ್ವಿಯಾಗಿದ್ದನ್ನು ಸ್ಮರಿಸಬಹುದು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…