ಮಂಗಳೂರಿನಲ್ಲಿ ಈಗಾಗಲೇ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದ್ದು ಪದವಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸದಿರುವುದು ಹಬ್ಬದ ಸಂಭ್ರಮ ಸವಿಯಲು ಅಡ್ಡಿಯಾಗಿದೆ. ನಾಡಿನ ಪ್ರಮುಖ ಹಬ್ಬ ದಸರಾಗೆ ಪೂರಕವಾಗುವಂತೆ ಪದವಿ ವಿದ್ಯಾರ್ಥಿಗಳಿಗೂ ರಜೆ ನೀಡುವ ಬಗ್ಗೆ ಹಲವಾರು ಪೋಷಕರು ಈಗಾಗಲೇ ಮನವಿ ಮಾಡುತ್ತಿದ್ದು ಸರಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಗ್ರಹಿಸಿದರು.
ದಸರಾವು ನಾಡಿನ ಅತ್ಯಂತ ಪ್ರಮುಖ ಹಬ್ಬವಾಗಿದ್ದು ಮಂಗಳೂರು ದಸರಾವು ಮೈಸೂರು ನಂತರ ಅತ್ಯಂತ ಜನಾಕರ್ಷಣೆ ಗಳಿಸಿರುವ ಹಬ್ಬವಾಗಿದೆ. ಹೀಗಾಗಿ ನವರಾತ್ರಿಯನ್ನು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು, ಸೇರಿದಂತೆ ಎಲ್ಲರೂ ಸಂಭ್ರಮದಿಂದ ಆಚರಿಸುವಂತಾಗಲು ರಜೆ ನೀಡುವ ಬಗ್ಗೆ ಆದೇಶ ಹೊರಡಿಸಬೇಕೆಂದು ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳ ಮೂಲಕ ಸರ್ಕಾರವನ್ನು ಆಗ್ರಹಿಸಿದರು.
ಹಿಂದಿನ ಸರ್ಕಾರದ ಅವಧಿಯಲ್ಲಿ ದಸರಾ ಹಬ್ಬದ ರಜೆಯಲ್ಲಿ ಉಂಟಾಗಿದ್ದ ವ್ಯತ್ಯಾಸವನ್ನು ಸರ್ಕಾರದ ಮಟ್ಟದಲ್ಲಿಯೇ ಮಾರ್ಪಾಡುಗೊಳಿಸುವಲ್ಲಿ
ಶಾಸಕ ವೇದವ್ಯಾಸ್ ಕಾಮತ್ ಅವರು ಯಶಸ್ವಿಯಾಗಿದ್ದನ್ನು ಸ್ಮರಿಸಬಹುದು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…