ಜನ ಮನದ ನಾಡಿ ಮಿಡಿತ

Advertisement

ತೋಕೂರು ಸ್ಫೋರ್ಟ್ಸ್ ಕ್ಲಬ್: ದಂತ ಚಿಕಿತ್ಸಾ ಅಭಿಯಾನ-2; ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಆಗತ್ಯ: ಶ್ರೀಮತಿ ಗೌರಿ

ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಮಂಗಳೂರು, ಜಿಲ್ಲಾಡಾಳಿತ, ದ.ಕ ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ಪಡುಪಣಂಬೂರು,ತಾಲೂಕು ಮತ್ತು ಜಿಲ್ಲಾ ಯುವ ಜನ ಒಕ್ಕೂಟ,ದ.ಕ ಜಿಲ್ಲೆ ಇವರುಗಳ ಮಾರ್ಗದರ್ಶನದಲ್ಲಿ ಜಿಲ್ಲಾ , ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ)ತೋಕೂರು ಹಳೆಯಂಗಡಿ, ಇದರ ಆಶ್ರಯದಲ್ಲಿ ಸಮುದಾಯ ದಂತ ವಿಭಾಗ,ಯೆನೆಪೋಯ ದಂತ ಕಾಲೇಜು , ಆಸ್ಪತ್ರೆ, ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ,ಯೆನೆಪೋಯ (ಪರಿಗಣಿಸಲ್ಪಟ್ಟ, ವಿಶ್ವವಿದ್ಯಾನಿಲಯ ದೇರಳಕಟ್ಟೆ) ಇವರ ಸಹಕಾರದೊಂದಿಗೆ, ಬುಧವಾರ ಬೆಳಿಗ್ಗೆ ಘಂಟೆ 11:00 ರಿಂದ “ದಂತ ತಪಾಸಣೆ ಶಿಬಿರ ಮತ್ತು ಮಾಹಿತಿ ಕಾರ್ಯಕ್ರಮ” ಅನುದಾನಿತ ಶ್ರೀ ಸುಬ್ರಹ್ಮಣ್ಯ ಹಿರಿಯ ಪ್ರಾಥಮಿಕ ಶಾಲೆ ,ಸುಬ್ರಹ್ಮಣ್ಯ ನಗರ, 10ನೇ ತೋಕೂರು ಇಲ್ಲಿ ನಡೆಯಿತು.


ಯೆನೆಪೋಯ ದಂತ ಕಾಲೇಜು, ಆಸ್ಪತ್ರೆ ದೇರಳಕಟ್ಟೆ. ಇಲ್ಲಿನ ಉಪನ್ಯಾಸಕರು ಡಾ!ಆತಿಫಾ ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀ ಭರತ್ ಕುಮಾರ್ ಅವರು ಶಾಲಾ ವಿಧ್ಯಾರ್ಥಿಗಳಿಗೆ ದಂತ ಚಿಕಿತ್ಸಾ ಬಗ್ಗೆ ಮಾಹಿತಿಯನ್ನು ನೀಡಿದರು.
ಈ ಅಭಿಯಾನದಲ್ಲಿ ಸ್ಫೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಶ್ರೀ ಜಗದೀಶ್ ಕುಲಾಲ್, ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಗೌರಿ, ಶಾಲೆಯ ಸಹ ಶಿಕ್ಷಕಿಯರಾದ ಶ್ರೀಮತಿ ಮೋಹಿನಿ, ಶ್ರೀಮತಿ ಸರಿತಾ, ಶ್ರೀಮತಿ ವಾಣಿಶ್ರೀ, ಶ್ರೀಮತಿ ಯಶವಂತಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಪ್ರೇಮಲತಾ ಸಹಾಯಕಿ ಶ್ರೀಮತಿ ವಿಶಾಂತಿ ಸ್ಫೋರ್ಟ್ಸ್ ಕ್ಲಬ್ ನ ಸದಸ್ಯರು,ಸದಸ್ಯೆಯರು, ಯೆನೆಪೋಯ ದಂತ ಕಾಲೇಜು , ಆಸ್ಪತ್ರೆಯ ಸಿಬ್ಬಂದಿ ವರ್ಗ ಹಾಗೂ ಮತ್ತಿತರರು ಪಾಲ್ಗೊಂಡು ಸಹಕರಿಸಿದರು.
ದಂತ ಚಿಕಿತ್ಸಾ ಶಿಬಿರದಲ್ಲಿ ಅಂಗನವಾಡಿ ಕೇಂದ್ರ ಮತ್ತು ಶಾಲಾ ವಿಧ್ಯಾರ್ಥಿಗಳು ಸೇರಿ ಸುಮಾರು 60 ಮಕ್ಕಳು ಇದರ ಪ್ರಯೋಜನವನ್ನು ಪಡೆದುಕೊಂಡರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!