ಜನ ಮನದ ನಾಡಿ ಮಿಡಿತ

Advertisement

ಈ ಬಾರಿ ಕಂಬಳಕ್ಕೆ ಹೊಸ ನಿಯಮ ಅನ್ವಯ, ವಿವರ ಇಲ್ಲಿದೆ…

ದಕ್ಷಿಣ ಕನ್ನಡ : ಕರಾವಳಿ ಕರ್ನಾಟಕದ ಜಾನಪದ ಕ್ರೀಡೆ,ಕಂಬಳವನ್ನು 24 ಗಂಟೆಯಲ್ಲಿ ಮುಕ್ತಾಯಗೊಳಿಸಲು ಹೊಸ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಮಟ್ಟದ ಕಂಬಳ ಹಾಗೂ ಶಿಸ್ತು ಸಮಿತಿ ಸಭೆ ಒಮ್ಮತದ ತೀರ್ಮಾನ ಕೈಗೊಂಡಿದೆ.

ದ.ಕ. ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಜನರ ಅಚ್ಚುಮೆಚ್ಚಿನ ಕಂಬಳವು ಹಿಂದಿನ ವರ್ಷಗಳಲ್ಲಿ ಒಂದಕ್ಕಿಂತ ಹೆಚ್ಚಿನ ದಿನ ನಡೆಯುವುದು ಸರ್ವೇಸಾಮಾನ್ಯ .ಈ ರೀತಿ ಕಂಬಳ ನಡೆದಾಗ ಆಯೋಜಕರಿಗೂ ಕಂಬಳದಲ್ಲಿ ಭಾಗವಹಿಸುವ ಕೋಣಗಳಿಗೂ ಸಾಕಷ್ಟು ಕಷ್ಟ ಆದ್ದರಿಂದ ಈ ಮೇಲಿನ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

      ನವೆಂಬರ್‌ನಲ್ಲಿ ವರ್ಷದ ಕಂಬಳ ಋತು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಏರ್ಪಡಿಸಿದ ಸಭೆಯಲ್ಲಿ ನ್ಯಾಯಾಲಯ ಹಾಗೂ ಸರ್ಕಾರದ ಆದೇಶ ಪ್ರಕಾರ ಶಿಸ್ತುಬದ್ಧವಾಗಿ ಕಂಬಳ ಆಯೋಜನೆ ಯಾವ ರೀತಿಯಲ್ಲಿ ಇರಬೇಕು ಎನ್ನುವ ಬಗ್ಗೆ ಸಮಾಲೋಚನೆ ನಡೆಯಿತು.ಕಂಬಳ ಮಂಜೊಟ್ಟಿಗೆ ಓಡಿಸುವವರು ಒಂದು ಬಾರಿ ಮಾತ್ರ ಕೋಣದ ಮೇಲೆ ಮೆಲ್ಲನೆ ಹೊಡೆಯಬಹುದು. ಒಂದು ಕಂಬಳದಲ್ಲಿ ಕೋಣಗಳಿಗೆ ಹೆಚ್ಚು ಬಾರಿ ಹೊಡೆದರೆ ಓಡಿಸುವವರಿಗೆ ಒಂದು ಬಾರಿ ಎಚ್ಚರಿಕೆ ನೀಡುವುದು ಹಾಗೂ ಅದರ ಮಾಲೀಕರಿಗೆ ಮಾಹಿತಿ ನೀಡುವುದು. ಎಚ್ಚರಿಕೆ ನೀಡಿದ ಬಳಿಕವೂ ಮುಂದಿನ ಕಂಬಳದಲ್ಲಿ ತಪ್ಪು ಪುನರಾವರ್ತಿಸುವ ಕಂಬಳದ ಓಟಗಾರನಿಗೆ ರೂಪಾಯಿ  5,000  ದಂಡ ವಿಧಿಸುವುದು. ಮೂರನೇ ಬಾರಿ ನಿಯಮ ಉಲ್ಲಂಘಿಸುವ ಓಟಗಾರನಿಗೆ ಮುಂದಿನ 1 ಕಂಬಳದಲ್ಲಿ ಅವಕಾಶ ನಿರಾಕರಣೆ ಶಿಕ್ಷೆ ನೀಡಲು ಸಭೆ ತೀರ್ಮಾನಿಸಿತು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!