ಜನ ಮನದ ನಾಡಿ ಮಿಡಿತ

Advertisement

ಈ ಬಾರಿ ಕಂಬಳಕ್ಕೆ ಹೊಸ ನಿಯಮ ಅನ್ವಯ, ವಿವರ ಇಲ್ಲಿದೆ…

ದಕ್ಷಿಣ ಕನ್ನಡ : ಕರಾವಳಿ ಕರ್ನಾಟಕದ ಜಾನಪದ ಕ್ರೀಡೆ,ಕಂಬಳವನ್ನು 24 ಗಂಟೆಯಲ್ಲಿ ಮುಕ್ತಾಯಗೊಳಿಸಲು ಹೊಸ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಮಟ್ಟದ ಕಂಬಳ ಹಾಗೂ ಶಿಸ್ತು ಸಮಿತಿ ಸಭೆ ಒಮ್ಮತದ ತೀರ್ಮಾನ ಕೈಗೊಂಡಿದೆ.

ದ.ಕ. ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಜನರ ಅಚ್ಚುಮೆಚ್ಚಿನ ಕಂಬಳವು ಹಿಂದಿನ ವರ್ಷಗಳಲ್ಲಿ ಒಂದಕ್ಕಿಂತ ಹೆಚ್ಚಿನ ದಿನ ನಡೆಯುವುದು ಸರ್ವೇಸಾಮಾನ್ಯ .ಈ ರೀತಿ ಕಂಬಳ ನಡೆದಾಗ ಆಯೋಜಕರಿಗೂ ಕಂಬಳದಲ್ಲಿ ಭಾಗವಹಿಸುವ ಕೋಣಗಳಿಗೂ ಸಾಕಷ್ಟು ಕಷ್ಟ ಆದ್ದರಿಂದ ಈ ಮೇಲಿನ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

      ನವೆಂಬರ್‌ನಲ್ಲಿ ವರ್ಷದ ಕಂಬಳ ಋತು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಏರ್ಪಡಿಸಿದ ಸಭೆಯಲ್ಲಿ ನ್ಯಾಯಾಲಯ ಹಾಗೂ ಸರ್ಕಾರದ ಆದೇಶ ಪ್ರಕಾರ ಶಿಸ್ತುಬದ್ಧವಾಗಿ ಕಂಬಳ ಆಯೋಜನೆ ಯಾವ ರೀತಿಯಲ್ಲಿ ಇರಬೇಕು ಎನ್ನುವ ಬಗ್ಗೆ ಸಮಾಲೋಚನೆ ನಡೆಯಿತು.ಕಂಬಳ ಮಂಜೊಟ್ಟಿಗೆ ಓಡಿಸುವವರು ಒಂದು ಬಾರಿ ಮಾತ್ರ ಕೋಣದ ಮೇಲೆ ಮೆಲ್ಲನೆ ಹೊಡೆಯಬಹುದು. ಒಂದು ಕಂಬಳದಲ್ಲಿ ಕೋಣಗಳಿಗೆ ಹೆಚ್ಚು ಬಾರಿ ಹೊಡೆದರೆ ಓಡಿಸುವವರಿಗೆ ಒಂದು ಬಾರಿ ಎಚ್ಚರಿಕೆ ನೀಡುವುದು ಹಾಗೂ ಅದರ ಮಾಲೀಕರಿಗೆ ಮಾಹಿತಿ ನೀಡುವುದು. ಎಚ್ಚರಿಕೆ ನೀಡಿದ ಬಳಿಕವೂ ಮುಂದಿನ ಕಂಬಳದಲ್ಲಿ ತಪ್ಪು ಪುನರಾವರ್ತಿಸುವ ಕಂಬಳದ ಓಟಗಾರನಿಗೆ ರೂಪಾಯಿ  5,000  ದಂಡ ವಿಧಿಸುವುದು. ಮೂರನೇ ಬಾರಿ ನಿಯಮ ಉಲ್ಲಂಘಿಸುವ ಓಟಗಾರನಿಗೆ ಮುಂದಿನ 1 ಕಂಬಳದಲ್ಲಿ ಅವಕಾಶ ನಿರಾಕರಣೆ ಶಿಕ್ಷೆ ನೀಡಲು ಸಭೆ ತೀರ್ಮಾನಿಸಿತು.

Leave a Reply

Your email address will not be published. Required fields are marked *

ಬಂಟ್ವಾಳ: ಆಡಳಿತ ಸೌಧದ ಲಿಪ್ಟ್ ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು..!

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರ ಆಯೋಜನೆ..!

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

error: Content is protected !!