ದಕ್ಷಿಣ ಕನ್ನಡ : ಕರಾವಳಿ ಕರ್ನಾಟಕದ ಜಾನಪದ ಕ್ರೀಡೆ,ಕಂಬಳವನ್ನು 24 ಗಂಟೆಯಲ್ಲಿ ಮುಕ್ತಾಯಗೊಳಿಸಲು ಹೊಸ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಮಟ್ಟದ ಕಂಬಳ ಹಾಗೂ ಶಿಸ್ತು ಸಮಿತಿ ಸಭೆ ಒಮ್ಮತದ ತೀರ್ಮಾನ ಕೈಗೊಂಡಿದೆ.
ದ.ಕ. ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಜನರ ಅಚ್ಚುಮೆಚ್ಚಿನ ಕಂಬಳವು ಹಿಂದಿನ ವರ್ಷಗಳಲ್ಲಿ ಒಂದಕ್ಕಿಂತ ಹೆಚ್ಚಿನ ದಿನ ನಡೆಯುವುದು ಸರ್ವೇಸಾಮಾನ್ಯ .ಈ ರೀತಿ ಕಂಬಳ ನಡೆದಾಗ ಆಯೋಜಕರಿಗೂ ಕಂಬಳದಲ್ಲಿ ಭಾಗವಹಿಸುವ ಕೋಣಗಳಿಗೂ ಸಾಕಷ್ಟು ಕಷ್ಟ ಆದ್ದರಿಂದ ಈ ಮೇಲಿನ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.
ನವೆಂಬರ್ನಲ್ಲಿ ವರ್ಷದ ಕಂಬಳ ಋತು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಏರ್ಪಡಿಸಿದ ಸಭೆಯಲ್ಲಿ ನ್ಯಾಯಾಲಯ ಹಾಗೂ ಸರ್ಕಾರದ ಆದೇಶ ಪ್ರಕಾರ ಶಿಸ್ತುಬದ್ಧವಾಗಿ ಕಂಬಳ ಆಯೋಜನೆ ಯಾವ ರೀತಿಯಲ್ಲಿ ಇರಬೇಕು ಎನ್ನುವ ಬಗ್ಗೆ ಸಮಾಲೋಚನೆ ನಡೆಯಿತು.ಕಂಬಳ ಮಂಜೊಟ್ಟಿಗೆ ಓಡಿಸುವವರು ಒಂದು ಬಾರಿ ಮಾತ್ರ ಕೋಣದ ಮೇಲೆ ಮೆಲ್ಲನೆ ಹೊಡೆಯಬಹುದು. ಒಂದು ಕಂಬಳದಲ್ಲಿ ಕೋಣಗಳಿಗೆ ಹೆಚ್ಚು ಬಾರಿ ಹೊಡೆದರೆ ಓಡಿಸುವವರಿಗೆ ಒಂದು ಬಾರಿ ಎಚ್ಚರಿಕೆ ನೀಡುವುದು ಹಾಗೂ ಅದರ ಮಾಲೀಕರಿಗೆ ಮಾಹಿತಿ ನೀಡುವುದು. ಎಚ್ಚರಿಕೆ ನೀಡಿದ ಬಳಿಕವೂ ಮುಂದಿನ ಕಂಬಳದಲ್ಲಿ ತಪ್ಪು ಪುನರಾವರ್ತಿಸುವ ಕಂಬಳದ ಓಟಗಾರನಿಗೆ ರೂಪಾಯಿ 5,000 ದಂಡ ವಿಧಿಸುವುದು. ಮೂರನೇ ಬಾರಿ ನಿಯಮ ಉಲ್ಲಂಘಿಸುವ ಓಟಗಾರನಿಗೆ ಮುಂದಿನ 1 ಕಂಬಳದಲ್ಲಿ ಅವಕಾಶ ನಿರಾಕರಣೆ ಶಿಕ್ಷೆ ನೀಡಲು ಸಭೆ ತೀರ್ಮಾನಿಸಿತು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…