ದಕ್ಷಿಣ ಕನ್ನಡ : ಕರಾವಳಿ ಕರ್ನಾಟಕದ ಜಾನಪದ ಕ್ರೀಡೆ,ಕಂಬಳವನ್ನು 24 ಗಂಟೆಯಲ್ಲಿ ಮುಕ್ತಾಯಗೊಳಿಸಲು ಹೊಸ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಮಟ್ಟದ ಕಂಬಳ ಹಾಗೂ ಶಿಸ್ತು ಸಮಿತಿ ಸಭೆ ಒಮ್ಮತದ ತೀರ್ಮಾನ ಕೈಗೊಂಡಿದೆ.
ದ.ಕ. ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಜನರ ಅಚ್ಚುಮೆಚ್ಚಿನ ಕಂಬಳವು ಹಿಂದಿನ ವರ್ಷಗಳಲ್ಲಿ ಒಂದಕ್ಕಿಂತ ಹೆಚ್ಚಿನ ದಿನ ನಡೆಯುವುದು ಸರ್ವೇಸಾಮಾನ್ಯ .ಈ ರೀತಿ ಕಂಬಳ ನಡೆದಾಗ ಆಯೋಜಕರಿಗೂ ಕಂಬಳದಲ್ಲಿ ಭಾಗವಹಿಸುವ ಕೋಣಗಳಿಗೂ ಸಾಕಷ್ಟು ಕಷ್ಟ ಆದ್ದರಿಂದ ಈ ಮೇಲಿನ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.
ನವೆಂಬರ್ನಲ್ಲಿ ವರ್ಷದ ಕಂಬಳ ಋತು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಏರ್ಪಡಿಸಿದ ಸಭೆಯಲ್ಲಿ ನ್ಯಾಯಾಲಯ ಹಾಗೂ ಸರ್ಕಾರದ ಆದೇಶ ಪ್ರಕಾರ ಶಿಸ್ತುಬದ್ಧವಾಗಿ ಕಂಬಳ ಆಯೋಜನೆ ಯಾವ ರೀತಿಯಲ್ಲಿ ಇರಬೇಕು ಎನ್ನುವ ಬಗ್ಗೆ ಸಮಾಲೋಚನೆ ನಡೆಯಿತು.ಕಂಬಳ ಮಂಜೊಟ್ಟಿಗೆ ಓಡಿಸುವವರು ಒಂದು ಬಾರಿ ಮಾತ್ರ ಕೋಣದ ಮೇಲೆ ಮೆಲ್ಲನೆ ಹೊಡೆಯಬಹುದು. ಒಂದು ಕಂಬಳದಲ್ಲಿ ಕೋಣಗಳಿಗೆ ಹೆಚ್ಚು ಬಾರಿ ಹೊಡೆದರೆ ಓಡಿಸುವವರಿಗೆ ಒಂದು ಬಾರಿ ಎಚ್ಚರಿಕೆ ನೀಡುವುದು ಹಾಗೂ ಅದರ ಮಾಲೀಕರಿಗೆ ಮಾಹಿತಿ ನೀಡುವುದು. ಎಚ್ಚರಿಕೆ ನೀಡಿದ ಬಳಿಕವೂ ಮುಂದಿನ ಕಂಬಳದಲ್ಲಿ ತಪ್ಪು ಪುನರಾವರ್ತಿಸುವ ಕಂಬಳದ ಓಟಗಾರನಿಗೆ ರೂಪಾಯಿ 5,000 ದಂಡ ವಿಧಿಸುವುದು. ಮೂರನೇ ಬಾರಿ ನಿಯಮ ಉಲ್ಲಂಘಿಸುವ ಓಟಗಾರನಿಗೆ ಮುಂದಿನ 1 ಕಂಬಳದಲ್ಲಿ ಅವಕಾಶ ನಿರಾಕರಣೆ ಶಿಕ್ಷೆ ನೀಡಲು ಸಭೆ ತೀರ್ಮಾನಿಸಿತು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…