ಜನ ಮನದ ನಾಡಿ ಮಿಡಿತ

Advertisement

ಉಮಿಕಲ್ ಬೆಟ್ಟದಲ್ಲಿ ಪ್ರತಿಷ್ಠಾಪಿಸಿದ್ದ ಪರಶುರಾಮನ ಮೂರ್ತಿ ದಿಢೀರ್ ಮಾಯ: ಡ್ರೋನ್ ಕ್ಯಾಮರಾದಲ್ಲಿ ಬಯಲಾಯ್ತು ಮೂರ್ತಿಯ ಅಸಲಿಯತ್ತು


ಉಡುಪಿ: ಬೈಲೂರಿನ ಉಮಿಕಲ್ ಬೆಟ್ಟದ ತುದಿಯಲ್ಲಿ ಪ್ರತಿಷ್ಠಾಪಿಸಲಾದ ಕಂಚಿನದ್ದೆಂದು ಹೇಳಲಾಗುತ್ತಿದ್ದ ಪರಶುರಾಮನ ವಿಗ್ರಹದ ಅಸಲಿಯತ್ತು ಕಡೆಗೂ ಬಯಲಾಗಿದೆ. ಡ್ರೋನ್ ಕ್ಯಾಮರಾದಲ್ಲಿ ನಕಲಿ ಮೂರ್ತಿಯ ಅಸಲಿ ಮುಖ ಜಗಜ್ಜಾಹೀರಾಗಿದೆ.
ಮೂರ್ತಿ ತೆರವುಗೊಳಿಸುವುದಕ್ಕೂ ಮೊದಲು ಮೂರ್ತಿಯ ಸುತ್ತ ದಪ್ಪದ ಕಪ್ಪು ಪ್ಲಾಸ್ಟಿಕ್ ಹೊದಿಕೆ ಹೊದಿಸಲಾಗಿತ್ತು. ಇದರಿಂದ ಯಾರಿಗೂ ಮೂರ್ತಿಯ ಸತ್ಯಾಸತ್ಯತೆ‌ ಗೊತ್ತಾಗುತ್ತಿರಲಿಲ್ಲ. ಅಲ್ಲದೇ ನಿಷೇಧವಿರುವುದರಿಂದ ಬೆಟ್ಟವನ್ನು ಪ್ರವೇಶಿಸಲು ಯಾರಿಗೂ ಅವಕಾಶವೂ ಇರಲಿಲ್ಲ. ಆದರೆ ಇದೀಗ ಹಿಂದೆ ಪ್ರತಿಷ್ಠಾಪಿಸಿದ್ದ ಪರಶುರಾಮನ ಮೂರ್ತಿಯ ಪಾದ, ಕಾಲು ಬಿಟ್ಟು ಉಳಿದ ಭಾಗ ಮಾಯವಾಗಿರುವುದು ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಗಿದೆ.


ಉಮಿಕಲ್ಲು ಬೆಟ್ಟದಲ್ಲಿ ಪ್ರತಿಷ್ಠಾಪಿಸಲಾಗಿದ್ದ 33 ಅಡಿ ಎತ್ತರದ ಪರಶುರಾಮನ ಕಂಚಿನ ಪ್ರತಿಮೆ ಇದೀಗ ಮಾಯವಾಗಿರು‌ವುದು ಡ್ರೋನ್ ಕ್ಯಾಮರ ಮೂಲಕ ಬಹಿರಂಗವಾಗಿದೆ. ಇದರೊಂದಿಗೆ ವಿಗ್ರಹ ಸಂಪೂರ್ಣ ನಕಲಿ ಎಂಬುದು ನೂರಕ್ಕೆ ನೂರರಷ್ಟು ಸತ್ಯ ಎಂಬುವುದು ಜನರಿಗೆ ಮನವರಿಕೆಯಾಗಿದೆ ಎಂದು ಹೋರಾಟಗಾರರು ಹೇಳುತಿದ್ದಾರೆ.
ಪೊಲೀಸರ ಬಿಗಿ ಬಂದೋಬಸ್ತ್ ನಲ್ಲಿ ಪರಶುರಾಮ ಮೂರ್ತಿ ಮಾಯ‌ವಾಗಿದೆ. ಇದನ್ನು ಹುಡುಕಿಕೊಡುವಂತೆ, ಸಮಾನಮನಸ್ಕ ಹೋರಾಟಗಾರರ ತಂಡದ ದಿವ್ಯಾನಾಯಕ್ ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!