ಉಡುಪಿ: ಬೈಲೂರಿನ ಉಮಿಕಲ್ ಬೆಟ್ಟದ ತುದಿಯಲ್ಲಿ ಪ್ರತಿಷ್ಠಾಪಿಸಲಾದ ಕಂಚಿನದ್ದೆಂದು ಹೇಳಲಾಗುತ್ತಿದ್ದ ಪರಶುರಾಮನ ವಿಗ್ರಹದ ಅಸಲಿಯತ್ತು ಕಡೆಗೂ ಬಯಲಾಗಿದೆ. ಡ್ರೋನ್ ಕ್ಯಾಮರಾದಲ್ಲಿ ನಕಲಿ ಮೂರ್ತಿಯ ಅಸಲಿ ಮುಖ ಜಗಜ್ಜಾಹೀರಾಗಿದೆ.
ಮೂರ್ತಿ ತೆರವುಗೊಳಿಸುವುದಕ್ಕೂ ಮೊದಲು ಮೂರ್ತಿಯ ಸುತ್ತ ದಪ್ಪದ ಕಪ್ಪು ಪ್ಲಾಸ್ಟಿಕ್ ಹೊದಿಕೆ ಹೊದಿಸಲಾಗಿತ್ತು. ಇದರಿಂದ ಯಾರಿಗೂ ಮೂರ್ತಿಯ ಸತ್ಯಾಸತ್ಯತೆ ಗೊತ್ತಾಗುತ್ತಿರಲಿಲ್ಲ. ಅಲ್ಲದೇ ನಿಷೇಧವಿರುವುದರಿಂದ ಬೆಟ್ಟವನ್ನು ಪ್ರವೇಶಿಸಲು ಯಾರಿಗೂ ಅವಕಾಶವೂ ಇರಲಿಲ್ಲ. ಆದರೆ ಇದೀಗ ಹಿಂದೆ ಪ್ರತಿಷ್ಠಾಪಿಸಿದ್ದ ಪರಶುರಾಮನ ಮೂರ್ತಿಯ ಪಾದ, ಕಾಲು ಬಿಟ್ಟು ಉಳಿದ ಭಾಗ ಮಾಯವಾಗಿರುವುದು ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಉಮಿಕಲ್ಲು ಬೆಟ್ಟದಲ್ಲಿ ಪ್ರತಿಷ್ಠಾಪಿಸಲಾಗಿದ್ದ 33 ಅಡಿ ಎತ್ತರದ ಪರಶುರಾಮನ ಕಂಚಿನ ಪ್ರತಿಮೆ ಇದೀಗ ಮಾಯವಾಗಿರುವುದು ಡ್ರೋನ್ ಕ್ಯಾಮರ ಮೂಲಕ ಬಹಿರಂಗವಾಗಿದೆ. ಇದರೊಂದಿಗೆ ವಿಗ್ರಹ ಸಂಪೂರ್ಣ ನಕಲಿ ಎಂಬುದು ನೂರಕ್ಕೆ ನೂರರಷ್ಟು ಸತ್ಯ ಎಂಬುವುದು ಜನರಿಗೆ ಮನವರಿಕೆಯಾಗಿದೆ ಎಂದು ಹೋರಾಟಗಾರರು ಹೇಳುತಿದ್ದಾರೆ.
ಪೊಲೀಸರ ಬಿಗಿ ಬಂದೋಬಸ್ತ್ ನಲ್ಲಿ ಪರಶುರಾಮ ಮೂರ್ತಿ ಮಾಯವಾಗಿದೆ. ಇದನ್ನು ಹುಡುಕಿಕೊಡುವಂತೆ, ಸಮಾನಮನಸ್ಕ ಹೋರಾಟಗಾರರ ತಂಡದ ದಿವ್ಯಾನಾಯಕ್ ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…