ಉಡುಪಿ: ಬೈಲೂರಿನ ಉಮಿಕಲ್ ಬೆಟ್ಟದ ತುದಿಯಲ್ಲಿ ಪ್ರತಿಷ್ಠಾಪಿಸಲಾದ ಕಂಚಿನದ್ದೆಂದು ಹೇಳಲಾಗುತ್ತಿದ್ದ ಪರಶುರಾಮನ ವಿಗ್ರಹದ ಅಸಲಿಯತ್ತು ಕಡೆಗೂ ಬಯಲಾಗಿದೆ. ಡ್ರೋನ್ ಕ್ಯಾಮರಾದಲ್ಲಿ ನಕಲಿ ಮೂರ್ತಿಯ ಅಸಲಿ ಮುಖ ಜಗಜ್ಜಾಹೀರಾಗಿದೆ.
ಮೂರ್ತಿ ತೆರವುಗೊಳಿಸುವುದಕ್ಕೂ ಮೊದಲು ಮೂರ್ತಿಯ ಸುತ್ತ ದಪ್ಪದ ಕಪ್ಪು ಪ್ಲಾಸ್ಟಿಕ್ ಹೊದಿಕೆ ಹೊದಿಸಲಾಗಿತ್ತು. ಇದರಿಂದ ಯಾರಿಗೂ ಮೂರ್ತಿಯ ಸತ್ಯಾಸತ್ಯತೆ ಗೊತ್ತಾಗುತ್ತಿರಲಿಲ್ಲ. ಅಲ್ಲದೇ ನಿಷೇಧವಿರುವುದರಿಂದ ಬೆಟ್ಟವನ್ನು ಪ್ರವೇಶಿಸಲು ಯಾರಿಗೂ ಅವಕಾಶವೂ ಇರಲಿಲ್ಲ. ಆದರೆ ಇದೀಗ ಹಿಂದೆ ಪ್ರತಿಷ್ಠಾಪಿಸಿದ್ದ ಪರಶುರಾಮನ ಮೂರ್ತಿಯ ಪಾದ, ಕಾಲು ಬಿಟ್ಟು ಉಳಿದ ಭಾಗ ಮಾಯವಾಗಿರುವುದು ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಉಮಿಕಲ್ಲು ಬೆಟ್ಟದಲ್ಲಿ ಪ್ರತಿಷ್ಠಾಪಿಸಲಾಗಿದ್ದ 33 ಅಡಿ ಎತ್ತರದ ಪರಶುರಾಮನ ಕಂಚಿನ ಪ್ರತಿಮೆ ಇದೀಗ ಮಾಯವಾಗಿರುವುದು ಡ್ರೋನ್ ಕ್ಯಾಮರ ಮೂಲಕ ಬಹಿರಂಗವಾಗಿದೆ. ಇದರೊಂದಿಗೆ ವಿಗ್ರಹ ಸಂಪೂರ್ಣ ನಕಲಿ ಎಂಬುದು ನೂರಕ್ಕೆ ನೂರರಷ್ಟು ಸತ್ಯ ಎಂಬುವುದು ಜನರಿಗೆ ಮನವರಿಕೆಯಾಗಿದೆ ಎಂದು ಹೋರಾಟಗಾರರು ಹೇಳುತಿದ್ದಾರೆ.
ಪೊಲೀಸರ ಬಿಗಿ ಬಂದೋಬಸ್ತ್ ನಲ್ಲಿ ಪರಶುರಾಮ ಮೂರ್ತಿ ಮಾಯವಾಗಿದೆ. ಇದನ್ನು ಹುಡುಕಿಕೊಡುವಂತೆ, ಸಮಾನಮನಸ್ಕ ಹೋರಾಟಗಾರರ ತಂಡದ ದಿವ್ಯಾನಾಯಕ್ ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…