ಉಡುಪಿ: ಬೈಲೂರಿನ ಉಮಿಕಲ್ ಬೆಟ್ಟದ ತುದಿಯಲ್ಲಿ ಪ್ರತಿಷ್ಠಾಪಿಸಲಾದ ಕಂಚಿನದ್ದೆಂದು ಹೇಳಲಾಗುತ್ತಿದ್ದ ಪರಶುರಾಮನ ವಿಗ್ರಹದ ಅಸಲಿಯತ್ತು ಕಡೆಗೂ ಬಯಲಾಗಿದೆ. ಡ್ರೋನ್ ಕ್ಯಾಮರಾದಲ್ಲಿ ನಕಲಿ ಮೂರ್ತಿಯ ಅಸಲಿ ಮುಖ ಜಗಜ್ಜಾಹೀರಾಗಿದೆ.
ಮೂರ್ತಿ ತೆರವುಗೊಳಿಸುವುದಕ್ಕೂ ಮೊದಲು ಮೂರ್ತಿಯ ಸುತ್ತ ದಪ್ಪದ ಕಪ್ಪು ಪ್ಲಾಸ್ಟಿಕ್ ಹೊದಿಕೆ ಹೊದಿಸಲಾಗಿತ್ತು. ಇದರಿಂದ ಯಾರಿಗೂ ಮೂರ್ತಿಯ ಸತ್ಯಾಸತ್ಯತೆ ಗೊತ್ತಾಗುತ್ತಿರಲಿಲ್ಲ. ಅಲ್ಲದೇ ನಿಷೇಧವಿರುವುದರಿಂದ ಬೆಟ್ಟವನ್ನು ಪ್ರವೇಶಿಸಲು ಯಾರಿಗೂ ಅವಕಾಶವೂ ಇರಲಿಲ್ಲ. ಆದರೆ ಇದೀಗ ಹಿಂದೆ ಪ್ರತಿಷ್ಠಾಪಿಸಿದ್ದ ಪರಶುರಾಮನ ಮೂರ್ತಿಯ ಪಾದ, ಕಾಲು ಬಿಟ್ಟು ಉಳಿದ ಭಾಗ ಮಾಯವಾಗಿರುವುದು ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಉಮಿಕಲ್ಲು ಬೆಟ್ಟದಲ್ಲಿ ಪ್ರತಿಷ್ಠಾಪಿಸಲಾಗಿದ್ದ 33 ಅಡಿ ಎತ್ತರದ ಪರಶುರಾಮನ ಕಂಚಿನ ಪ್ರತಿಮೆ ಇದೀಗ ಮಾಯವಾಗಿರುವುದು ಡ್ರೋನ್ ಕ್ಯಾಮರ ಮೂಲಕ ಬಹಿರಂಗವಾಗಿದೆ. ಇದರೊಂದಿಗೆ ವಿಗ್ರಹ ಸಂಪೂರ್ಣ ನಕಲಿ ಎಂಬುದು ನೂರಕ್ಕೆ ನೂರರಷ್ಟು ಸತ್ಯ ಎಂಬುವುದು ಜನರಿಗೆ ಮನವರಿಕೆಯಾಗಿದೆ ಎಂದು ಹೋರಾಟಗಾರರು ಹೇಳುತಿದ್ದಾರೆ.
ಪೊಲೀಸರ ಬಿಗಿ ಬಂದೋಬಸ್ತ್ ನಲ್ಲಿ ಪರಶುರಾಮ ಮೂರ್ತಿ ಮಾಯವಾಗಿದೆ. ಇದನ್ನು ಹುಡುಕಿಕೊಡುವಂತೆ, ಸಮಾನಮನಸ್ಕ ಹೋರಾಟಗಾರರ ತಂಡದ ದಿವ್ಯಾನಾಯಕ್ ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…