ಜನ ಮನದ ನಾಡಿ ಮಿಡಿತ

Advertisement

ಕುಡ್ಲದ ಪಿಲಿಪರ್ಬ-2023ರ ಚಪ್ಪರ ಮುಹೂರ್ತ ಕಾರ್ಯಕ್ರಮ

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಡೆಯಲಿರುವ ದ್ವಿತೀಯ ವರ್ಷದ “ಕುಡ್ಲದ ಪಿಲಿ ಪರ್ಬ-2023” ದ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಭಾನುವಾರ ಮುಂಜಾನೆ ಜರುಗಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, “ಕರಾವಳಿ ಭಾಗದಲ್ಲಿ ದಸರಾ ಎಂದರೆ ಅಲ್ಲಿ ಹುಲಿವೇಷ ಇದ್ದೇ ಇರುತ್ತದೆ. ಈಗ ಈ ಕಲೆ ಕರಾವಳಿ ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ ಜನಪ್ರಿಯತೆ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಜನಪ್ರಿಯತೆ ಜೊತೆಗೆ ಈ ಕಲೆಗೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಇದೇ ಅಕ್ಟೋಬರ್ 21 ರ ಶನಿವಾರದಂದು ನಡೆಯಲಿರುವ ದ್ವಿತೀಯ ವರ್ಷದ ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದೆ.

ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ 15 ಹುಲಿವೇಷ ತಂಡಗಳಿಗೂ ಶುಭಹಾರೈಕೆಗಳು ಹಾಗೂ ಹುಲಿವೇಷ ತಂಡಗಳನ್ನು ಪ್ರೋತ್ಸಾಹಿಸಲು ಆಗಮಿಸುವ ಎಲ್ಲರಿಗೂ ಸುಸ್ವಾಗತ, ಒಟ್ಟಾರೆಯಾಗಿ ಕಾರ್ಯಕ್ರಮವು ಅಭೂತಪೂರ್ವ ಯಶಸ್ಸು ಸಾಧಿಸಲಿ, ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ, ಮ. ನ. ಪಾ. ಸದಸ್ಯರುಗಳಾದ ಶಕೀಲಾ ಖಾವ, ಜಯಲಕ್ಷ್ಮಿ, ಭರತ್ ಸೂಟರ್ ಪೇಟೆ, ಹಾಗೂ ನರೇಶ್ ಶೆಣೈ , ಉದಯ ಪೂಜಾರಿ, ಅಶ್ವಿತ್ ಕೊಟ್ಟಾರಿ, ಲಲಿತ್ ರಾಜ್ ಮೆಂಡನ್, ಕಮಲಾಕ್ಷ ಬಜಿಲ್ಕೇರಿ, ಮೋಹನ್ ಪೂಜಾರಿ, ಜಗದೀಶ್ ಕದ್ರಿ, ಚೇತನ್ ಕಾಮತ್, ಸೂರಜ್ ಕಾಮತ್, ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!