ಜನ ಮನದ ನಾಡಿ ಮಿಡಿತ

Advertisement

ಉಡಾ ಬೇಟೆಯಾಡಿ ಫೋಟೊಗಳಿಗೆ ಪೋಸ್ ಕೊಟ್ಟವ ಈಗ ಪೋಲೀಸರ ಅತಿಥಿ!!!

ಬಂಟ್ವಾಳ: ಭಾರತದ ಅಪರೂಪದ ವನ್ಯ ಜೀವಿಗಳಲ್ಲಿ ಒಂದಾದ ಉಡಾ (indian monitor lizard) ವನ್ನು ವ್ಯಕ್ತಿಯೋರ್ವ ಬೇಟೆಯಾಡಿ ಬಳಿಕ ಅದನ್ನು ಫೋಟೊಗಳಿಗೆ ಪೋಸ್ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ವಗ್ಗದಲ್ಲಿ ಬೆಳಕಿಗೆ ಬಂದಿದೆ. ಉಡಾವನ್ನು ಸಾಯಿಸಿದ ವ್ಯಕ್ತಿಯನ್ನು ವಗ್ಗದ ಸುಧಾಕರ ಎಂದು ಗುರುತ್ತಿಸಲಾಗಿದ್ದು ಆತನ ವಿರುದ್ದ ವನ್ಯ ಜೀವಿ ಸಂರಕ್ಷಣಾ ಕಾಯಿದೆ 1972 ಅನ್ವಯ ಕೇಸ್ ದಾಖಲು ಮಾಡಿದ್ದಾರೆ.

ಅಕ್ಟೋಬರ್ 11 ರಂದು ಘಟನೆ ಬೆಳಕಿಗೆ ಬಂದಿದ್ದು ಬೃಹತ್ ಗಾತ್ರದ ಉಡವನ್ನು ಹಿಂಸಾತ್ಮಕ ರೀತಿಯನ್ನು ಸಾಯಿಸಿ ಬಳಿಕ ಅದನ್ನು ತೆಗೆದುಕೊಂಡು ವಿಜ್ರಂಭಿಸುತ್ತಿದ್ದ ಎಂದು ಸ್ಥಳಿಯರು ಮಾಹಿತಿ ನೀಡಿದ್ದು ಜೊತೆಗೆ ಸಾಮಾಜಿಕ ಜಾಲಾ ತಾಣಗಳಲ್ಲಿ ಅದನ್ನು ಹರಿಯ ಬಿಟ್ಟಿದ್ದ. ದೂರು ದಾಖಲಾಗುತ್ತಿದ್ದಂತೆ ಆರೋಪಿ ತಲೆ ಮರೆಸಿಕೊಂಡಿದ್ದು, ಬಂಟ್ವಾಳ ವಲಯ ಅರಣ್ಯಾಧಿಕಾರಿಯವರು ಪ್ರಕರಣದ ತನಿಖೆ ನಡಸುತ್ತಿದ್ದಾರೆ ಎಂದು ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಅಂಥೋಣಿ ಎಸ್‌. ಮರಿಯಪ್ಪ ಮಾಹಿತಿ ನೀಡಿದ್ದಾರೆ.

ಉಡಾ ಸಾಯಿಸಿದ ಬಗ್ಗೆ ಪ್ರಕರಣ ದಾಖಲು ಮಾಡಲಾಗಿದ್ದು, ಆರೋಪಿ ಸುಧಾಕರ್ ತಲೆ ಮರೆಸಿಕೊಂಡಿದ್ದಾನೆ. ಆತ ಉಡಾ ಸಾಯಿಸಿ ಶೇರ್ ಮಾಡಿದ ಸಾಮಾಜಿಕ ಜಾಲಾತಾಣ ವಾಟ್ಸ್‌ಅಪ್ ಎಡ್ಮಿನ್ ನನ್ನು ವಿಚಾರಣೆ ಕರೆಸಿ ತನಿಖೆ ನಡಸಿದ್ದು ಆತನ ಸಿಡಿಆರ್‌ ಪರಿಶೀಲನೆ ನಢೆಸುತ್ತಿದ್ದು ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದಿದ್ದಾರೆ.
ಚರ್ಮಾ, ಮೂಳೆಗಳಿಗಾಗಿ ಬೇಟೆಗಾರರ ವಕ್ರ ದೃಷ್ಟಿಗೆ ಬಿದ್ದಿರುವ ಉಡಾ ಅವನತಿಯ ಹಾದಿಯಲ್ಲಿದ್ದು ಇದನ್ನು (ಪ್ರವರ್ಗ A)ಯನ್ನುಅಳಿವಿನ ಅಂಚಿನಲ್ಲಿರುವ ಅಪರೂಪದ ಸರೀಸೃಪ ಎಂದು ಘೋಷಣೆ ಮಾಡಲಾಗಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!