ಬಂಟ್ವಾಳ: ಭಾರತದ ಅಪರೂಪದ ವನ್ಯ ಜೀವಿಗಳಲ್ಲಿ ಒಂದಾದ ಉಡಾ (indian monitor lizard) ವನ್ನು ವ್ಯಕ್ತಿಯೋರ್ವ ಬೇಟೆಯಾಡಿ ಬಳಿಕ ಅದನ್ನು ಫೋಟೊಗಳಿಗೆ ಪೋಸ್ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ವಗ್ಗದಲ್ಲಿ ಬೆಳಕಿಗೆ ಬಂದಿದೆ. ಉಡಾವನ್ನು ಸಾಯಿಸಿದ ವ್ಯಕ್ತಿಯನ್ನು ವಗ್ಗದ ಸುಧಾಕರ ಎಂದು ಗುರುತ್ತಿಸಲಾಗಿದ್ದು ಆತನ ವಿರುದ್ದ ವನ್ಯ ಜೀವಿ ಸಂರಕ್ಷಣಾ ಕಾಯಿದೆ 1972 ಅನ್ವಯ ಕೇಸ್ ದಾಖಲು ಮಾಡಿದ್ದಾರೆ.
ಅಕ್ಟೋಬರ್ 11 ರಂದು ಘಟನೆ ಬೆಳಕಿಗೆ ಬಂದಿದ್ದು ಬೃಹತ್ ಗಾತ್ರದ ಉಡವನ್ನು ಹಿಂಸಾತ್ಮಕ ರೀತಿಯನ್ನು ಸಾಯಿಸಿ ಬಳಿಕ ಅದನ್ನು ತೆಗೆದುಕೊಂಡು ವಿಜ್ರಂಭಿಸುತ್ತಿದ್ದ ಎಂದು ಸ್ಥಳಿಯರು ಮಾಹಿತಿ ನೀಡಿದ್ದು ಜೊತೆಗೆ ಸಾಮಾಜಿಕ ಜಾಲಾ ತಾಣಗಳಲ್ಲಿ ಅದನ್ನು ಹರಿಯ ಬಿಟ್ಟಿದ್ದ. ದೂರು ದಾಖಲಾಗುತ್ತಿದ್ದಂತೆ ಆರೋಪಿ ತಲೆ ಮರೆಸಿಕೊಂಡಿದ್ದು, ಬಂಟ್ವಾಳ ವಲಯ ಅರಣ್ಯಾಧಿಕಾರಿಯವರು ಪ್ರಕರಣದ ತನಿಖೆ ನಡಸುತ್ತಿದ್ದಾರೆ ಎಂದು ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಅಂಥೋಣಿ ಎಸ್. ಮರಿಯಪ್ಪ ಮಾಹಿತಿ ನೀಡಿದ್ದಾರೆ.
ಉಡಾ ಸಾಯಿಸಿದ ಬಗ್ಗೆ ಪ್ರಕರಣ ದಾಖಲು ಮಾಡಲಾಗಿದ್ದು, ಆರೋಪಿ ಸುಧಾಕರ್ ತಲೆ ಮರೆಸಿಕೊಂಡಿದ್ದಾನೆ. ಆತ ಉಡಾ ಸಾಯಿಸಿ ಶೇರ್ ಮಾಡಿದ ಸಾಮಾಜಿಕ ಜಾಲಾತಾಣ ವಾಟ್ಸ್ಅಪ್ ಎಡ್ಮಿನ್ ನನ್ನು ವಿಚಾರಣೆ ಕರೆಸಿ ತನಿಖೆ ನಡಸಿದ್ದು ಆತನ ಸಿಡಿಆರ್ ಪರಿಶೀಲನೆ ನಢೆಸುತ್ತಿದ್ದು ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದಿದ್ದಾರೆ.
ಚರ್ಮಾ, ಮೂಳೆಗಳಿಗಾಗಿ ಬೇಟೆಗಾರರ ವಕ್ರ ದೃಷ್ಟಿಗೆ ಬಿದ್ದಿರುವ ಉಡಾ ಅವನತಿಯ ಹಾದಿಯಲ್ಲಿದ್ದು ಇದನ್ನು (ಪ್ರವರ್ಗ A)ಯನ್ನುಅಳಿವಿನ ಅಂಚಿನಲ್ಲಿರುವ ಅಪರೂಪದ ಸರೀಸೃಪ ಎಂದು ಘೋಷಣೆ ಮಾಡಲಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…