ಬಂಟ್ವಾಳ: ಭಾರತದ ಅಪರೂಪದ ವನ್ಯ ಜೀವಿಗಳಲ್ಲಿ ಒಂದಾದ ಉಡಾ (indian monitor lizard) ವನ್ನು ವ್ಯಕ್ತಿಯೋರ್ವ ಬೇಟೆಯಾಡಿ ಬಳಿಕ ಅದನ್ನು ಫೋಟೊಗಳಿಗೆ ಪೋಸ್ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ವಗ್ಗದಲ್ಲಿ ಬೆಳಕಿಗೆ ಬಂದಿದೆ. ಉಡಾವನ್ನು ಸಾಯಿಸಿದ ವ್ಯಕ್ತಿಯನ್ನು ವಗ್ಗದ ಸುಧಾಕರ ಎಂದು ಗುರುತ್ತಿಸಲಾಗಿದ್ದು ಆತನ ವಿರುದ್ದ ವನ್ಯ ಜೀವಿ ಸಂರಕ್ಷಣಾ ಕಾಯಿದೆ 1972 ಅನ್ವಯ ಕೇಸ್ ದಾಖಲು ಮಾಡಿದ್ದಾರೆ.
ಅಕ್ಟೋಬರ್ 11 ರಂದು ಘಟನೆ ಬೆಳಕಿಗೆ ಬಂದಿದ್ದು ಬೃಹತ್ ಗಾತ್ರದ ಉಡವನ್ನು ಹಿಂಸಾತ್ಮಕ ರೀತಿಯನ್ನು ಸಾಯಿಸಿ ಬಳಿಕ ಅದನ್ನು ತೆಗೆದುಕೊಂಡು ವಿಜ್ರಂಭಿಸುತ್ತಿದ್ದ ಎಂದು ಸ್ಥಳಿಯರು ಮಾಹಿತಿ ನೀಡಿದ್ದು ಜೊತೆಗೆ ಸಾಮಾಜಿಕ ಜಾಲಾ ತಾಣಗಳಲ್ಲಿ ಅದನ್ನು ಹರಿಯ ಬಿಟ್ಟಿದ್ದ. ದೂರು ದಾಖಲಾಗುತ್ತಿದ್ದಂತೆ ಆರೋಪಿ ತಲೆ ಮರೆಸಿಕೊಂಡಿದ್ದು, ಬಂಟ್ವಾಳ ವಲಯ ಅರಣ್ಯಾಧಿಕಾರಿಯವರು ಪ್ರಕರಣದ ತನಿಖೆ ನಡಸುತ್ತಿದ್ದಾರೆ ಎಂದು ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಅಂಥೋಣಿ ಎಸ್. ಮರಿಯಪ್ಪ ಮಾಹಿತಿ ನೀಡಿದ್ದಾರೆ.
ಉಡಾ ಸಾಯಿಸಿದ ಬಗ್ಗೆ ಪ್ರಕರಣ ದಾಖಲು ಮಾಡಲಾಗಿದ್ದು, ಆರೋಪಿ ಸುಧಾಕರ್ ತಲೆ ಮರೆಸಿಕೊಂಡಿದ್ದಾನೆ. ಆತ ಉಡಾ ಸಾಯಿಸಿ ಶೇರ್ ಮಾಡಿದ ಸಾಮಾಜಿಕ ಜಾಲಾತಾಣ ವಾಟ್ಸ್ಅಪ್ ಎಡ್ಮಿನ್ ನನ್ನು ವಿಚಾರಣೆ ಕರೆಸಿ ತನಿಖೆ ನಡಸಿದ್ದು ಆತನ ಸಿಡಿಆರ್ ಪರಿಶೀಲನೆ ನಢೆಸುತ್ತಿದ್ದು ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದಿದ್ದಾರೆ.
ಚರ್ಮಾ, ಮೂಳೆಗಳಿಗಾಗಿ ಬೇಟೆಗಾರರ ವಕ್ರ ದೃಷ್ಟಿಗೆ ಬಿದ್ದಿರುವ ಉಡಾ ಅವನತಿಯ ಹಾದಿಯಲ್ಲಿದ್ದು ಇದನ್ನು (ಪ್ರವರ್ಗ A)ಯನ್ನುಅಳಿವಿನ ಅಂಚಿನಲ್ಲಿರುವ ಅಪರೂಪದ ಸರೀಸೃಪ ಎಂದು ಘೋಷಣೆ ಮಾಡಲಾಗಿದೆ.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…