ಜನ ಮನದ ನಾಡಿ ಮಿಡಿತ

Advertisement

ಯುವ ಪತ್ರಕರ್ತ ವೇಣುಗೋಪಾಲ್ ಹೃದಯಘಾತದಿಂದ ನಿಧನ

ದಕ್ಷಿಣ ಕನ್ನಡ :ಮೂಡುಬಿದಿರೆ ಪ್ರೆಸ್ ಕ್ಲಬ್ ಇದರ ನಿಕಟಪೂರ್ವ ಅಧ್ಯಕ್ಷ, ಜಯಕಿರಣ ಪತ್ರಿಕೆಯ ಮೂಡುಬಿದಿರೆ ತಾಲೂಕು ವರದಿಗಾರ ಹಾಗೂ ಯುವ ನ್ಯಾಯವಾದಿ ವೇಣುಗೋಪಾಲ (30) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಪತ್ರಕರ್ತರಾಗಿದ್ದ ಅವರು ನ್ಯಾಯವಾದಿಯಾಗಿ ಮೂಡುಬಿದರೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿದ್ದರು,
ಮೂಡಬಿದ್ರೆಯಲ್ಲಿ ಪತ್ರಿಕಾ ಭವನದ ಕನಸು ಕಂಡಿದ್ದ ವೇಣುಗೋಪಾಲ್ ಇವರು, ಸತತ ಪ್ರಯತ್ನದಿಂದ ಶಾಸಕರ ಮುಖಾಂತರ ಸ್ವಂತ ಸ್ಥಳ ದೊರಕಿಸಿದ್ದು, ವೇಣುಗೋಪಾಲ್ ಅಧ್ಯಕ್ಷರಾಗಿದ್ದಾಗ ಅಂದಿನ ಮುಖ್ಯಮಂತ್ರಿಗಳಿಂದ ಶಿಲನ್ಯಾಸವನ್ನು ನೆರವೇರಿಸಿದ್ದು, ಪತ್ರಿಕಾ ಭವನದ ಕೆಲಸ ಪ್ರಗತಿಯಲ್ಲಿದೆ.


ಪತ್ರಿಕಾ ಕ್ಷೇತ್ರ ಮಾತ್ರವಲ್ಲದೆ ಸಾಂಸ್ಕೃತಿಕ ಹಾಗೂ ಇತರ ಕ್ಷೇತ್ರಗಳಲ್ಲೂ ತನ್ನನ್ನು ತೊಡಗಿಸಿಕೊಂಡಿದ್ದ ವೇಣುಗೋಪಾಲ ನ್ಯಾಯವಾದಿಯಾಗಿಯೂ ಉತ್ತಮ ಜನಾನುರಾಗಿಯಾಗಿದ್ದರು ಕಡು ಬಡತನದಿಂದ ಬರುವ ಕಕ್ಷಿದಾರರಿಗೆ ಯಾವುದೇ ಹಣವನ್ನು ನಿರೀಕ್ಷಿಸದೆ ಕಾನೂನು ಸಲಹೆ ಸೇವೆ ನೀಡುತ್ತಿದ್ದರು ಅವರು ನಿನ್ನೆ ರಾತ್ರಿ ತನ್ನ ಸಹೋದರಿಯ ಮನೆಗೆ ಹೋಗಿದ್ದು ಇಂದು ಬೆಳಿಗ್ಗೆ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಸಚ್ಚೇರಿಪೇಟೆ ನಿವಾಸಿಯಾಗಿರುವ ವೇಣುಗೋಪಾಲ ಅವರು ಅವಿವಾಹಿತರಾಗಿದ್ದಾರೆ. ಮೃತರ ನಿಧನಕ್ಕೆ ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮೂಡುಬಿದಿರೆ ವಕೀಲರ ಸಂಘ ಮತ್ತು ಜಿಲ್ಲಾ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!