ಜನ ಮನದ ನಾಡಿ ಮಿಡಿತ

Advertisement

ಯುವ ಪತ್ರಕರ್ತ ವೇಣುಗೋಪಾಲ್ ಹೃದಯಘಾತದಿಂದ ನಿಧನ

ದಕ್ಷಿಣ ಕನ್ನಡ :ಮೂಡುಬಿದಿರೆ ಪ್ರೆಸ್ ಕ್ಲಬ್ ಇದರ ನಿಕಟಪೂರ್ವ ಅಧ್ಯಕ್ಷ, ಜಯಕಿರಣ ಪತ್ರಿಕೆಯ ಮೂಡುಬಿದಿರೆ ತಾಲೂಕು ವರದಿಗಾರ ಹಾಗೂ ಯುವ ನ್ಯಾಯವಾದಿ ವೇಣುಗೋಪಾಲ (30) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಪತ್ರಕರ್ತರಾಗಿದ್ದ ಅವರು ನ್ಯಾಯವಾದಿಯಾಗಿ ಮೂಡುಬಿದರೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿದ್ದರು,
ಮೂಡಬಿದ್ರೆಯಲ್ಲಿ ಪತ್ರಿಕಾ ಭವನದ ಕನಸು ಕಂಡಿದ್ದ ವೇಣುಗೋಪಾಲ್ ಇವರು, ಸತತ ಪ್ರಯತ್ನದಿಂದ ಶಾಸಕರ ಮುಖಾಂತರ ಸ್ವಂತ ಸ್ಥಳ ದೊರಕಿಸಿದ್ದು, ವೇಣುಗೋಪಾಲ್ ಅಧ್ಯಕ್ಷರಾಗಿದ್ದಾಗ ಅಂದಿನ ಮುಖ್ಯಮಂತ್ರಿಗಳಿಂದ ಶಿಲನ್ಯಾಸವನ್ನು ನೆರವೇರಿಸಿದ್ದು, ಪತ್ರಿಕಾ ಭವನದ ಕೆಲಸ ಪ್ರಗತಿಯಲ್ಲಿದೆ.


ಪತ್ರಿಕಾ ಕ್ಷೇತ್ರ ಮಾತ್ರವಲ್ಲದೆ ಸಾಂಸ್ಕೃತಿಕ ಹಾಗೂ ಇತರ ಕ್ಷೇತ್ರಗಳಲ್ಲೂ ತನ್ನನ್ನು ತೊಡಗಿಸಿಕೊಂಡಿದ್ದ ವೇಣುಗೋಪಾಲ ನ್ಯಾಯವಾದಿಯಾಗಿಯೂ ಉತ್ತಮ ಜನಾನುರಾಗಿಯಾಗಿದ್ದರು ಕಡು ಬಡತನದಿಂದ ಬರುವ ಕಕ್ಷಿದಾರರಿಗೆ ಯಾವುದೇ ಹಣವನ್ನು ನಿರೀಕ್ಷಿಸದೆ ಕಾನೂನು ಸಲಹೆ ಸೇವೆ ನೀಡುತ್ತಿದ್ದರು ಅವರು ನಿನ್ನೆ ರಾತ್ರಿ ತನ್ನ ಸಹೋದರಿಯ ಮನೆಗೆ ಹೋಗಿದ್ದು ಇಂದು ಬೆಳಿಗ್ಗೆ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಸಚ್ಚೇರಿಪೇಟೆ ನಿವಾಸಿಯಾಗಿರುವ ವೇಣುಗೋಪಾಲ ಅವರು ಅವಿವಾಹಿತರಾಗಿದ್ದಾರೆ. ಮೃತರ ನಿಧನಕ್ಕೆ ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮೂಡುಬಿದಿರೆ ವಕೀಲರ ಸಂಘ ಮತ್ತು ಜಿಲ್ಲಾ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!