ದಕ್ಷಿಣ ಕನ್ನಡ :ಮೂಡುಬಿದಿರೆ ಪ್ರೆಸ್ ಕ್ಲಬ್ ಇದರ ನಿಕಟಪೂರ್ವ ಅಧ್ಯಕ್ಷ, ಜಯಕಿರಣ ಪತ್ರಿಕೆಯ ಮೂಡುಬಿದಿರೆ ತಾಲೂಕು ವರದಿಗಾರ ಹಾಗೂ ಯುವ ನ್ಯಾಯವಾದಿ ವೇಣುಗೋಪಾಲ (30) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಪತ್ರಕರ್ತರಾಗಿದ್ದ ಅವರು ನ್ಯಾಯವಾದಿಯಾಗಿ ಮೂಡುಬಿದರೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿದ್ದರು,
ಮೂಡಬಿದ್ರೆಯಲ್ಲಿ ಪತ್ರಿಕಾ ಭವನದ ಕನಸು ಕಂಡಿದ್ದ ವೇಣುಗೋಪಾಲ್ ಇವರು, ಸತತ ಪ್ರಯತ್ನದಿಂದ ಶಾಸಕರ ಮುಖಾಂತರ ಸ್ವಂತ ಸ್ಥಳ ದೊರಕಿಸಿದ್ದು, ವೇಣುಗೋಪಾಲ್ ಅಧ್ಯಕ್ಷರಾಗಿದ್ದಾಗ ಅಂದಿನ ಮುಖ್ಯಮಂತ್ರಿಗಳಿಂದ ಶಿಲನ್ಯಾಸವನ್ನು ನೆರವೇರಿಸಿದ್ದು, ಪತ್ರಿಕಾ ಭವನದ ಕೆಲಸ ಪ್ರಗತಿಯಲ್ಲಿದೆ.
ಪತ್ರಿಕಾ ಕ್ಷೇತ್ರ ಮಾತ್ರವಲ್ಲದೆ ಸಾಂಸ್ಕೃತಿಕ ಹಾಗೂ ಇತರ ಕ್ಷೇತ್ರಗಳಲ್ಲೂ ತನ್ನನ್ನು ತೊಡಗಿಸಿಕೊಂಡಿದ್ದ ವೇಣುಗೋಪಾಲ ನ್ಯಾಯವಾದಿಯಾಗಿಯೂ ಉತ್ತಮ ಜನಾನುರಾಗಿಯಾಗಿದ್ದರು ಕಡು ಬಡತನದಿಂದ ಬರುವ ಕಕ್ಷಿದಾರರಿಗೆ ಯಾವುದೇ ಹಣವನ್ನು ನಿರೀಕ್ಷಿಸದೆ ಕಾನೂನು ಸಲಹೆ ಸೇವೆ ನೀಡುತ್ತಿದ್ದರು ಅವರು ನಿನ್ನೆ ರಾತ್ರಿ ತನ್ನ ಸಹೋದರಿಯ ಮನೆಗೆ ಹೋಗಿದ್ದು ಇಂದು ಬೆಳಿಗ್ಗೆ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಸಚ್ಚೇರಿಪೇಟೆ ನಿವಾಸಿಯಾಗಿರುವ ವೇಣುಗೋಪಾಲ ಅವರು ಅವಿವಾಹಿತರಾಗಿದ್ದಾರೆ. ಮೃತರ ನಿಧನಕ್ಕೆ ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮೂಡುಬಿದಿರೆ ವಕೀಲರ ಸಂಘ ಮತ್ತು ಜಿಲ್ಲಾ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…