ಜನ ಮನದ ನಾಡಿ ಮಿಡಿತ

Advertisement

ದಸಂಸ ಭೀಮವಾದ ವತಿಯಿಂದ ರಾಜ ಮಹಿಷಾಸುರ ಹಬ್ಬ ಆಚರಣೆ


ಉಡುಪಿ: ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಘಟಕ ಮತ್ತು ದಸಂಸ ಭೀಮವಾದ ಉಡುಪಿ ಜಿಲ್ಲೆ ಇದರ ವತಿಯಿಂದ ಅಂಬೇಡ್ಕರ್ ಅವರ ಧಮ್ಮದೀಕ್ಷೆ ದಿನಾಚರಣೆ ಮತ್ತು ಮೂಲನಿವಾಸಿಗಳ ರಾಜ ಮಹಿಷಾಸುರ ಹಬ್ಬ ಕಾರ್ಯಕ್ರಮವನ್ನು ಬೈರಂಪಳ್ಳಿ ಗ್ರಾಮದ ಅಂಬೇಡ್ಕರ್ ಭವನದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.


ಕಾರ್ಯಕ್ರಮ ಉದ್ಘಾಟಿಸಿ ಸಾಹಿತಿ‌ ಡಾ. ಕೆ.ಎ. ಓಬಳೇಶ್ ಮಾತನಾಡಿ, ಈ ನೆಲದ ಮೂಲನಿವಾಸಿಗಳ ರಾಜ ಮಹಿಷಾಸುರ. ಈ ದೇಶಕ್ಕೆ ವಲಸೆ ಬಂದ ಆರ್ಯರು ಮಹಿಷಾನನ್ನು ರಾಕ್ಷಸ ಎಂದು ಬಿಂಬಿಸಿ, ಚಿತ್ರಿಸಿದ್ದಾರೆ. ಮಹಿಷಾಸುರನ ಆಳ್ವಿಕೆಗೆ ಒಳಪಟ್ಟ ನಾಡು ಮಹಿಷಾಮಂಡಲವಾಗಿತ್ತು. ಮಹಿಷನ ಗುರುತು ಎಮ್ಮೆ ಎನ್ನುವ ಪರಿಕಲ್ಪನೆಯಾಗಿದೆ‌ ಎಂದರು.


ಆರ್ ಪಿಐಕೆ ಪಕ್ಷದ ಜಿಲ್ಲಾಧ್ಯಕ್ಷ ಸದಾಶಿವ ಶೆಟ್ಟಿ ಹೇರೂರು ಅಧ್ಯಕ್ಷತೆ ವಹಿಸಿದ್ದರು.
ಆರ್ ಪಿಐಕೆ ಪಕ್ಷದ ರಾಜ್ಯಸಮಿತಿಯ ಸದಸ್ಯ ಕೆ.ಬಿ. ರಾಜು ಕೊಡಗು, ಜನಪರ ಹೋರಾಟಗಾರ ಶೇಖರ್ ಹಾವಂಜೆ, ದಸಂಸ ಜಿಲ್ಲಾ ಸಂಚಾಲಕ‌ ಸಂಜೀವ ಕುಕ್ಕೆಹಳ್ಳಿ, ಜಿಲ್ಲಾ ಸಂಘಟಕ ರಮೇಶ್ ಹರಿಖಂಡಿಗೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ. ಮಮತಾ ಪಿ. ಶೆಟ್ಟಿ..!

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

error: Content is protected !!