ಉಡುಪಿ: ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಘಟಕ ಮತ್ತು ದಸಂಸ ಭೀಮವಾದ ಉಡುಪಿ ಜಿಲ್ಲೆ ಇದರ ವತಿಯಿಂದ ಅಂಬೇಡ್ಕರ್ ಅವರ ಧಮ್ಮದೀಕ್ಷೆ ದಿನಾಚರಣೆ ಮತ್ತು ಮೂಲನಿವಾಸಿಗಳ ರಾಜ ಮಹಿಷಾಸುರ ಹಬ್ಬ ಕಾರ್ಯಕ್ರಮವನ್ನು ಬೈರಂಪಳ್ಳಿ ಗ್ರಾಮದ ಅಂಬೇಡ್ಕರ್ ಭವನದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಸಾಹಿತಿ ಡಾ. ಕೆ.ಎ. ಓಬಳೇಶ್ ಮಾತನಾಡಿ, ಈ ನೆಲದ ಮೂಲನಿವಾಸಿಗಳ ರಾಜ ಮಹಿಷಾಸುರ. ಈ ದೇಶಕ್ಕೆ ವಲಸೆ ಬಂದ ಆರ್ಯರು ಮಹಿಷಾನನ್ನು ರಾಕ್ಷಸ ಎಂದು ಬಿಂಬಿಸಿ, ಚಿತ್ರಿಸಿದ್ದಾರೆ. ಮಹಿಷಾಸುರನ ಆಳ್ವಿಕೆಗೆ ಒಳಪಟ್ಟ ನಾಡು ಮಹಿಷಾಮಂಡಲವಾಗಿತ್ತು. ಮಹಿಷನ ಗುರುತು ಎಮ್ಮೆ ಎನ್ನುವ ಪರಿಕಲ್ಪನೆಯಾಗಿದೆ ಎಂದರು.
ಆರ್ ಪಿಐಕೆ ಪಕ್ಷದ ಜಿಲ್ಲಾಧ್ಯಕ್ಷ ಸದಾಶಿವ ಶೆಟ್ಟಿ ಹೇರೂರು ಅಧ್ಯಕ್ಷತೆ ವಹಿಸಿದ್ದರು.
ಆರ್ ಪಿಐಕೆ ಪಕ್ಷದ ರಾಜ್ಯಸಮಿತಿಯ ಸದಸ್ಯ ಕೆ.ಬಿ. ರಾಜು ಕೊಡಗು, ಜನಪರ ಹೋರಾಟಗಾರ ಶೇಖರ್ ಹಾವಂಜೆ, ದಸಂಸ ಜಿಲ್ಲಾ ಸಂಚಾಲಕ ಸಂಜೀವ ಕುಕ್ಕೆಹಳ್ಳಿ, ಜಿಲ್ಲಾ ಸಂಘಟಕ ರಮೇಶ್ ಹರಿಖಂಡಿಗೆ ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…