ಉಡುಪಿ: ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಘಟಕ ಮತ್ತು ದಸಂಸ ಭೀಮವಾದ ಉಡುಪಿ ಜಿಲ್ಲೆ ಇದರ ವತಿಯಿಂದ ಅಂಬೇಡ್ಕರ್ ಅವರ ಧಮ್ಮದೀಕ್ಷೆ ದಿನಾಚರಣೆ ಮತ್ತು ಮೂಲನಿವಾಸಿಗಳ ರಾಜ ಮಹಿಷಾಸುರ ಹಬ್ಬ ಕಾರ್ಯಕ್ರಮವನ್ನು ಬೈರಂಪಳ್ಳಿ ಗ್ರಾಮದ ಅಂಬೇಡ್ಕರ್ ಭವನದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಸಾಹಿತಿ ಡಾ. ಕೆ.ಎ. ಓಬಳೇಶ್ ಮಾತನಾಡಿ, ಈ ನೆಲದ ಮೂಲನಿವಾಸಿಗಳ ರಾಜ ಮಹಿಷಾಸುರ. ಈ ದೇಶಕ್ಕೆ ವಲಸೆ ಬಂದ ಆರ್ಯರು ಮಹಿಷಾನನ್ನು ರಾಕ್ಷಸ ಎಂದು ಬಿಂಬಿಸಿ, ಚಿತ್ರಿಸಿದ್ದಾರೆ. ಮಹಿಷಾಸುರನ ಆಳ್ವಿಕೆಗೆ ಒಳಪಟ್ಟ ನಾಡು ಮಹಿಷಾಮಂಡಲವಾಗಿತ್ತು. ಮಹಿಷನ ಗುರುತು ಎಮ್ಮೆ ಎನ್ನುವ ಪರಿಕಲ್ಪನೆಯಾಗಿದೆ ಎಂದರು.
ಆರ್ ಪಿಐಕೆ ಪಕ್ಷದ ಜಿಲ್ಲಾಧ್ಯಕ್ಷ ಸದಾಶಿವ ಶೆಟ್ಟಿ ಹೇರೂರು ಅಧ್ಯಕ್ಷತೆ ವಹಿಸಿದ್ದರು.
ಆರ್ ಪಿಐಕೆ ಪಕ್ಷದ ರಾಜ್ಯಸಮಿತಿಯ ಸದಸ್ಯ ಕೆ.ಬಿ. ರಾಜು ಕೊಡಗು, ಜನಪರ ಹೋರಾಟಗಾರ ಶೇಖರ್ ಹಾವಂಜೆ, ದಸಂಸ ಜಿಲ್ಲಾ ಸಂಚಾಲಕ ಸಂಜೀವ ಕುಕ್ಕೆಹಳ್ಳಿ, ಜಿಲ್ಲಾ ಸಂಘಟಕ ರಮೇಶ್ ಹರಿಖಂಡಿಗೆ ಉಪಸ್ಥಿತರಿದ್ದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…