ಉಡುಪಿ: ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಘಟಕ ಮತ್ತು ದಸಂಸ ಭೀಮವಾದ ಉಡುಪಿ ಜಿಲ್ಲೆ ಇದರ ವತಿಯಿಂದ ಅಂಬೇಡ್ಕರ್ ಅವರ ಧಮ್ಮದೀಕ್ಷೆ ದಿನಾಚರಣೆ ಮತ್ತು ಮೂಲನಿವಾಸಿಗಳ ರಾಜ ಮಹಿಷಾಸುರ ಹಬ್ಬ ಕಾರ್ಯಕ್ರಮವನ್ನು ಬೈರಂಪಳ್ಳಿ ಗ್ರಾಮದ ಅಂಬೇಡ್ಕರ್ ಭವನದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಸಾಹಿತಿ ಡಾ. ಕೆ.ಎ. ಓಬಳೇಶ್ ಮಾತನಾಡಿ, ಈ ನೆಲದ ಮೂಲನಿವಾಸಿಗಳ ರಾಜ ಮಹಿಷಾಸುರ. ಈ ದೇಶಕ್ಕೆ ವಲಸೆ ಬಂದ ಆರ್ಯರು ಮಹಿಷಾನನ್ನು ರಾಕ್ಷಸ ಎಂದು ಬಿಂಬಿಸಿ, ಚಿತ್ರಿಸಿದ್ದಾರೆ. ಮಹಿಷಾಸುರನ ಆಳ್ವಿಕೆಗೆ ಒಳಪಟ್ಟ ನಾಡು ಮಹಿಷಾಮಂಡಲವಾಗಿತ್ತು. ಮಹಿಷನ ಗುರುತು ಎಮ್ಮೆ ಎನ್ನುವ ಪರಿಕಲ್ಪನೆಯಾಗಿದೆ ಎಂದರು.
ಆರ್ ಪಿಐಕೆ ಪಕ್ಷದ ಜಿಲ್ಲಾಧ್ಯಕ್ಷ ಸದಾಶಿವ ಶೆಟ್ಟಿ ಹೇರೂರು ಅಧ್ಯಕ್ಷತೆ ವಹಿಸಿದ್ದರು.
ಆರ್ ಪಿಐಕೆ ಪಕ್ಷದ ರಾಜ್ಯಸಮಿತಿಯ ಸದಸ್ಯ ಕೆ.ಬಿ. ರಾಜು ಕೊಡಗು, ಜನಪರ ಹೋರಾಟಗಾರ ಶೇಖರ್ ಹಾವಂಜೆ, ದಸಂಸ ಜಿಲ್ಲಾ ಸಂಚಾಲಕ ಸಂಜೀವ ಕುಕ್ಕೆಹಳ್ಳಿ, ಜಿಲ್ಲಾ ಸಂಘಟಕ ರಮೇಶ್ ಹರಿಖಂಡಿಗೆ ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…