ಉಡುಪಿ: ಬ್ರಹ್ಮಾವರ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬದ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಂದಾಯ ಇಲಾಖೆಯ ಸರ್ವರ್ ಸಮಸ್ಯೆಯಿಂದಾಗಿ ನೋಂದಣಿಗಾಗಿ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ಎದುರಾಗಿದೆ. ದಿನಂಪ್ರತಿ ನೂರಾರು ಮಂದಿ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಉಪ ನೋಂದಣಾಧಿಕಾರಿ ಯವರಲ್ಲಿ ವಿಚಾರಿಸಿ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಹಳೆ ಕಚೇರಿಯಲ್ಲಿ ಮೂಲ ಸೌಕರ್ಯಗಳ ಕೊರತೆಯಿಂದ ಜನಸಾಮಾನ್ಯರಿಗೆ ಕಷ್ಟವಾಗುತ್ತಿದ್ದು, ತಕ್ಷಣವೇ ನೂತನ ಬ್ರಹ್ಮಾವರ ತಾಲೂಕು ಸೌಧಕ್ಕೆ ಸ್ಥಳಾಂತರಿಸುವಂತೆ ತಿಳಿಸಿದರು.
ರಾಜ್ಯ ಸರ್ಕಾರ ಕೋಟ್ಯಂತರ ರೂಪಾಯಿಗಳ ಆದಾಯ ತರುವ ನೋಂದಣಿ ಪ್ರಕ್ರಿಯೆಯ ಬಗ್ಗೆ ಇಲಾಖೆ ಸರ್ವರ್ ದೋಷ ಸಹಿತ ವಿವಿಧ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ವಹಿಸಿ ಜನಸಾಮಾನ್ಯರಿಗೆ ಸಂಕಷ್ಟ ಎದುರಾಗಿದೆ. ಸರ್ಕಾರ ಕೂಡಲೇ ಈ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಸುಧೀರ್ ಶೆಟ್ಟಿ, ಸಚಿನ್ ಪೂಜಾರಿ, ರಾಜು ಪೂಜಾರಿ, ಸಂತೋಷ್ ಜತ್ತನ್, ಗಣೇಶ್ ಕುಲಾಲ್, ಪ್ರದೀಪ್ ಬೈಕಾಡಿ ಮೊದಲಾದವರು ಉಪಸ್ಥಿತರಿದ್ದರು.
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…