ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ (ರಿ.)ಅಮನಬೆಟ್ಟು, ಪಡುಮಾರ್ನಾಡ್ ಇದರ ಸಕ್ರೀಯ ಸದಸ್ಯ ರತ್ನಾಕರ್ ಕೋಟೆಬಾಗಿಲು ಇವರ ಸಹೋದರ ಸದಾನಂದ ಕೆ. ಸುವರ್ಣ ಇವರಿಗೆ ತುರ್ತು ಚಿಕಿತ್ಸೆಗೆ ಸಾಯಿ ಮಾರ್ನಾಡ್ ತಂಡದಿಂದ ರೂ.10000 ವನ್ನು ಭಾನುವಾರ ನೀಡಲಾಯಿತು.
ಸದಾನಂದ ಅವರು ಕೆಲಸ ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಸಂದರ್ಭ ಗಾಡಿಯಿಂದ ಬಿದ್ದು ತಲೆಗೆ ಏಟಾಗಿದ್ದು ತಕ್ಷಣ ಅವರನ್ನು ಎ. ಜೆ. ಆಸ್ಪತ್ರೆ ಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಮಿತಿಯ ಸದಸ್ಯ ರತ್ನಾಕರ್ ಇವರಿಗೆ 2ತಿಂಗಳ ಹಿಂದೆ ಅಪಘಾತ ವಾಗಿದ್ದು, ಅದೇ ತಿಂಗಳಲ್ಲಿ ಅವರ ಅಪ್ಪನಿಗೂ ಕೂಡ ಅಪಘಾತ ವಾಗಿತ್ತು. ಇವರ ಮನೆಯ ಆರ್ಥಿಕ ಪರಿಸ್ಥಿತಿ ತುಂಬಾ ಹದಗೆಟ್ಟಿದ್ದು ಸದಾನಂದ ಇವರಿಗೆ 3-4ಲಕ್ಷ ದಷ್ಟು ಖರ್ಚು ಆಗಬಹುದು ಎಂದು ಡಾಕ್ಟರ್ ತಿಳಿಸಿರುತ್ತಾರೆ. ಇವರ ಕುಟುಂಬಕ್ಕೆ ತುರ್ತು ಚಿಕಿತ್ಸೆ ಗಾಗಿ ಸಾಯಿ ಮಾರ್ನಾಡ್ ತಂಡವು ಸಹಾಯಧನ ನೀಡುವ ಮೂಲಕ ಬಡ ಕುಟುಂಬದ ವ್ಯಥೆಗೆ ಸ್ಪಂದಿಸಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…