ಜನ ಮನದ ನಾಡಿ ಮಿಡಿತ

Advertisement

ರಂಗೋಲಿಯು ಭಗವಂತನನ್ನು ಆಸ್ವಾದಿಸುವ ಕಲೆ; ಕೃಷ್ಣ ಭಟ್ ಪಾವಂಜೆ

ಮುಲ್ಕಿ: “ರಂಗೋಲಿಯನ್ನು ಸಾಂಪ್ರದಾಯಿಕವಾಗಿ ಬಿಡಿಸಬೇಕು. ರಂಗೋಲಿಯು ಭಗವಂತನನ್ನು ಆಸ್ವಾದಿಸುವ ಒಂದು ಕಲೆ” ಎಂದು ವೇದಮೂರ್ತಿ ಕೃಷ್ಣ ಭಟ್ ಪಾವಂಜೆ ಹೇಳಿದರು.

ಅವರು ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ವಿದ್ಯಾವಿನಾಯಕ ಯುವಕ ಮಂಡಲದ ಸುವರ್ಣ ಮಹೋತ್ಸವದ ಅಂಗವಾಗಿ ಏರ್ಪಡಿಸಿರುವ ಮುಕ್ತ ರಂಗೋಲಿ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ, ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ, ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್ (ರಿ), ಹಳೆಯಂಗಡಿ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಹಳೆಯಂಗಡಿ, ಶ್ರೀ ವಿದ್ಯಾ ವಿನಾಯಕ ರಜತ ಸೇವಾ ಟ್ರಸ್ಟ್ (ರಿ) ಯುವತಿ ಮತ್ತು ಮಹಿಳಾ ಮಂಡಲ (ರಿ) ಹಳೆಯಂಗಡಿ ಇವರ ಸಹಯೋಗದಲ್ಲಿ ನಡೆದ ಸ್ಪರ್ಧೆಯ ಉಧ್ಘಾಟನಾ ಸಮಾರಂಭದಲ್ಲಿ ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ಸೂರ್ಯ ಕುಮಾರ್, ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ರಘು ಕೆ.ದೇವಾಡಿಗ, ಶ್ರೀ ವಿದ್ಯಾವಿನಾಯಕ ಯುವಕ ಮಂಡಲದ ಅಧ್ಯಕ್ಷರಾದ ನಾಗೇಶ್ ಟಿ.ಜಿ., ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಧ್ಯಕ್ಷರಾದ ಸುಧಾಕರ ಆರ್.ಅಮೀನ್, ಸಲಹಾ ಸಮಿತಿಯ ಅಧ್ಯಕ್ಷರಾದ ಮೋಹನ್ ಬಂಗೇರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಿಲ್ಲೆಯ ವಿವಿಧ ಕಡೆಗಳಿಂದ 32 ಮಂದಿ ಸ್ಪರ್ಧಾಳುಗಳು ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಯುವತಿ ಮಂಡಲದ ಕೋಶಾಧಿಕಾರಿ ಕುಮಾರಿ ನಿರ್ಮಿತರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಸಮಾರಂಭದಲ್ಲಿ ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಸುಧಾಕರ ಆರ್. ಅಮೀನ್ ಸ್ವಾಗತಿಸಿ,

ಯುವಕ ಮಂಡಲದ ಅಧ್ಯಕ್ಷರಾದ ನಾಗೇಶ್ ಟಿ. ಜಿ. ವಂದಿಸಿದರು. ಸುವರ್ಣ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಮದಾಸ್ ಪಾವಂಜೆ ಕಾರ್ಯಕ್ರಮ ನಿರೂಪಿಸಿದ್ದರು.

Leave a Reply

Your email address will not be published. Required fields are marked *

ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ…!

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

error: Content is protected !!