ಜನ ಮನದ ನಾಡಿ ಮಿಡಿತ

Advertisement

ವೇತನ ತಾರತಮ್ಯ: ಎಂಆರ್ ಪಿಎಲ್ ವಿರುದ್ಧ ಪ್ರತಿಭಟನೆ

ಸುರತ್ಕಲ್: ಕೈಗಾರಿಕೆ ಸ್ಥಾಪನೆ ಸಂದರ್ಭದಲ್ಲಿ ಭೂಮಿ ಕಳೆದುಕೊಂಡಿದ್ದ 293 ಮಂದಿ ನಿರ್ವಸಿತರಿಗೆ ಓಎಂಪಿಎಲ್ ಕಂಪೆನಿ ಕೆಪಿಟಿಯಲ್ಲಿ ತರಬೇತಿ ಕೊಟ್ಟು ಕೆಲಸಕ್ಕೆ ನೇಮಿಸಿಕೊಂಡಿತ್ತು. ಆದರೆ ಈಗ ಕಂಪೆನಿಯು ಎಂಆರ್ ಪಿಎಲ್ ಜೊತೆಗೆ ವಿಲೀನಗೊಂಡಿದ್ದರೂ ತಮಗೆ ವೇತನ ಪಾವತಿಯಲ್ಲಿ ಅಧಿಕಾರಿಗಳು ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಕಾರ್ಮಿಕರು ಎಂಆರ್ ಪಿ ಎಲ್ ಏರೊಮ್ಯಾಟಿಕ್ಸ್ ಕಾಂಪ್ಲೆಕ್ಸ್ ಎಂಪ್ಲಾಯಿಸ್ ಯೂನಿಯನ್ ಅಧ್ಯಕ್ಷ ಸುಧೀರ್ ಕುಮಾರ್ ನೇತೃತ್ವದಲ್ಲಿ ಎರಡು ದಿನಗಳ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಕಾನ ಬಳಿ ಪ್ರತಿಭಟನೆ ನಡೆಸುತ್ತಿರುವ ಕಂಪೆನಿಯ ಕಾರ್ಮಿಕರು ತಮಗೆ ಉದ್ಯೋಗ ಭದ್ರತೆ ಜೊತೆಗೆ ವೇತನ ಪಾವತಿಯಲ್ಲಿ ತಾರತಮ್ಯ ಮಾಡದೇ ಏಕರೂಪ ವೇತನ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ಮಾತಾಡಿದ ಸುಧೀರ್ ಕುಮಾರ್ ಅವರು, “ಓಎಂಪಿಎಲ್ ಅನ್ನು ಎಂಆರ್ ಪಿಎಲ್ ಜೊತೆಗೆ ವಿಲೀನ ಮಾಡಲಾಗಿದೆ. ನಮಗೆ 2022ರ ಡಿಸೆಂಬರ್ ತಿಂಗಳಲ್ಲಿ ಏಕರೂಪ ಸಂಬಳ ನೀಡಬೇಕೆಂದು ಎಂಆರ್ ಪಿಎಲ್ ಬೋರ್ಡ್ ಸ್ವತಂತ್ರ ನಿರ್ದೇಶಕರು ಆದೇಶವನ್ನು ಹೊರಡಿಸಿದ್ದಾರೆ. ಆದರೆ ಇಲ್ಲಿಯವರೆಗೂ ತಾರತಮ್ಯ ಧೋರಣೆ ಮುಂದುವರಿದಿದೆ. ಮೇಲಿನ ಅಧಿಕಾರಿಗಳು ಕೊಟ್ಟರೂ ಕೆಳಗಡೆ ಇರುವ ಹೆಚ್ ಆರ್ ವಿಭಾಗದ ಅಧಿಕಾರಿಗಳು ಕೊಡುತ್ತಿಲ್ಲ. ಆದಷ್ಟು ಬೇಗನೆ ಬಾಕಿ ವೇತನ ಪಾವತಿ ಮಾಡುವ ಜೊತೆಗೆ ಏಕರೂಪ ವೇತನ ಜಾರಿಯಾಗಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಂಪೆನಿ ಅಧಿಕಾರಿಗಳ ವಿರುದ್ಧ ಉಗ್ರ ಪ್ರತಿಭಟನೆ ನಡೆಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.


ಎಂಆರ್ ಪಿಎಲ್ ಅಧಿಕಾರಿಗಳ ವಿರುದ್ಧ ಇದು ಮೂರನೇ ಬಾರಿ ಉದ್ಯೋಗಿಗಳು ಪ್ರತಿಭಟನೆ ನಡೆಸುತ್ತಿದ್ದು ಈ ಹಿಂದೆಯೂ ನೀಡಿದ್ದ ಬೇಡಿಕೆಗಳನ್ನು ಈಡೇರಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಭೂ ನಿರ್ವಸಿತರಿಗೆ ಉದ್ಯೋಗ ಸಿಕ್ಕಿತು ಎಂದಾಗ ವೇತನ ಸಮಸ್ಯೆ ಎದುರಾಗಿದ್ದು ಅಧಿಕಾರಿಗಳು ಕೂಡಲೇ ಎಚ್ಚೆತ್ತು ಕ್ರಮ ಜರುಗಿಸಬೇಕಾದ ಅಗತ್ಯವಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!