ಜನ ಮನದ ನಾಡಿ ಮಿಡಿತ

Advertisement

ವೇತನ ತಾರತಮ್ಯ: ಎಂಆರ್ ಪಿಎಲ್ ವಿರುದ್ಧ ಪ್ರತಿಭಟನೆ

ಸುರತ್ಕಲ್: ಕೈಗಾರಿಕೆ ಸ್ಥಾಪನೆ ಸಂದರ್ಭದಲ್ಲಿ ಭೂಮಿ ಕಳೆದುಕೊಂಡಿದ್ದ 293 ಮಂದಿ ನಿರ್ವಸಿತರಿಗೆ ಓಎಂಪಿಎಲ್ ಕಂಪೆನಿ ಕೆಪಿಟಿಯಲ್ಲಿ ತರಬೇತಿ ಕೊಟ್ಟು ಕೆಲಸಕ್ಕೆ ನೇಮಿಸಿಕೊಂಡಿತ್ತು. ಆದರೆ ಈಗ ಕಂಪೆನಿಯು ಎಂಆರ್ ಪಿಎಲ್ ಜೊತೆಗೆ ವಿಲೀನಗೊಂಡಿದ್ದರೂ ತಮಗೆ ವೇತನ ಪಾವತಿಯಲ್ಲಿ ಅಧಿಕಾರಿಗಳು ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಕಾರ್ಮಿಕರು ಎಂಆರ್ ಪಿ ಎಲ್ ಏರೊಮ್ಯಾಟಿಕ್ಸ್ ಕಾಂಪ್ಲೆಕ್ಸ್ ಎಂಪ್ಲಾಯಿಸ್ ಯೂನಿಯನ್ ಅಧ್ಯಕ್ಷ ಸುಧೀರ್ ಕುಮಾರ್ ನೇತೃತ್ವದಲ್ಲಿ ಎರಡು ದಿನಗಳ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಕಾನ ಬಳಿ ಪ್ರತಿಭಟನೆ ನಡೆಸುತ್ತಿರುವ ಕಂಪೆನಿಯ ಕಾರ್ಮಿಕರು ತಮಗೆ ಉದ್ಯೋಗ ಭದ್ರತೆ ಜೊತೆಗೆ ವೇತನ ಪಾವತಿಯಲ್ಲಿ ತಾರತಮ್ಯ ಮಾಡದೇ ಏಕರೂಪ ವೇತನ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ಮಾತಾಡಿದ ಸುಧೀರ್ ಕುಮಾರ್ ಅವರು, “ಓಎಂಪಿಎಲ್ ಅನ್ನು ಎಂಆರ್ ಪಿಎಲ್ ಜೊತೆಗೆ ವಿಲೀನ ಮಾಡಲಾಗಿದೆ. ನಮಗೆ 2022ರ ಡಿಸೆಂಬರ್ ತಿಂಗಳಲ್ಲಿ ಏಕರೂಪ ಸಂಬಳ ನೀಡಬೇಕೆಂದು ಎಂಆರ್ ಪಿಎಲ್ ಬೋರ್ಡ್ ಸ್ವತಂತ್ರ ನಿರ್ದೇಶಕರು ಆದೇಶವನ್ನು ಹೊರಡಿಸಿದ್ದಾರೆ. ಆದರೆ ಇಲ್ಲಿಯವರೆಗೂ ತಾರತಮ್ಯ ಧೋರಣೆ ಮುಂದುವರಿದಿದೆ. ಮೇಲಿನ ಅಧಿಕಾರಿಗಳು ಕೊಟ್ಟರೂ ಕೆಳಗಡೆ ಇರುವ ಹೆಚ್ ಆರ್ ವಿಭಾಗದ ಅಧಿಕಾರಿಗಳು ಕೊಡುತ್ತಿಲ್ಲ. ಆದಷ್ಟು ಬೇಗನೆ ಬಾಕಿ ವೇತನ ಪಾವತಿ ಮಾಡುವ ಜೊತೆಗೆ ಏಕರೂಪ ವೇತನ ಜಾರಿಯಾಗಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಂಪೆನಿ ಅಧಿಕಾರಿಗಳ ವಿರುದ್ಧ ಉಗ್ರ ಪ್ರತಿಭಟನೆ ನಡೆಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.


ಎಂಆರ್ ಪಿಎಲ್ ಅಧಿಕಾರಿಗಳ ವಿರುದ್ಧ ಇದು ಮೂರನೇ ಬಾರಿ ಉದ್ಯೋಗಿಗಳು ಪ್ರತಿಭಟನೆ ನಡೆಸುತ್ತಿದ್ದು ಈ ಹಿಂದೆಯೂ ನೀಡಿದ್ದ ಬೇಡಿಕೆಗಳನ್ನು ಈಡೇರಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಭೂ ನಿರ್ವಸಿತರಿಗೆ ಉದ್ಯೋಗ ಸಿಕ್ಕಿತು ಎಂದಾಗ ವೇತನ ಸಮಸ್ಯೆ ಎದುರಾಗಿದ್ದು ಅಧಿಕಾರಿಗಳು ಕೂಡಲೇ ಎಚ್ಚೆತ್ತು ಕ್ರಮ ಜರುಗಿಸಬೇಕಾದ ಅಗತ್ಯವಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!