ಸುರತ್ಕಲ್: ಕೈಗಾರಿಕೆ ಸ್ಥಾಪನೆ ಸಂದರ್ಭದಲ್ಲಿ ಭೂಮಿ ಕಳೆದುಕೊಂಡಿದ್ದ 293 ಮಂದಿ ನಿರ್ವಸಿತರಿಗೆ ಓಎಂಪಿಎಲ್ ಕಂಪೆನಿ ಕೆಪಿಟಿಯಲ್ಲಿ ತರಬೇತಿ ಕೊಟ್ಟು ಕೆಲಸಕ್ಕೆ ನೇಮಿಸಿಕೊಂಡಿತ್ತು. ಆದರೆ ಈಗ ಕಂಪೆನಿಯು ಎಂಆರ್ ಪಿಎಲ್ ಜೊತೆಗೆ ವಿಲೀನಗೊಂಡಿದ್ದರೂ ತಮಗೆ ವೇತನ ಪಾವತಿಯಲ್ಲಿ ಅಧಿಕಾರಿಗಳು ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಕಾರ್ಮಿಕರು ಎಂಆರ್ ಪಿ ಎಲ್ ಏರೊಮ್ಯಾಟಿಕ್ಸ್ ಕಾಂಪ್ಲೆಕ್ಸ್ ಎಂಪ್ಲಾಯಿಸ್ ಯೂನಿಯನ್ ಅಧ್ಯಕ್ಷ ಸುಧೀರ್ ಕುಮಾರ್ ನೇತೃತ್ವದಲ್ಲಿ ಎರಡು ದಿನಗಳ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕಾನ ಬಳಿ ಪ್ರತಿಭಟನೆ ನಡೆಸುತ್ತಿರುವ ಕಂಪೆನಿಯ ಕಾರ್ಮಿಕರು ತಮಗೆ ಉದ್ಯೋಗ ಭದ್ರತೆ ಜೊತೆಗೆ ವೇತನ ಪಾವತಿಯಲ್ಲಿ ತಾರತಮ್ಯ ಮಾಡದೇ ಏಕರೂಪ ವೇತನ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ಮಾತಾಡಿದ ಸುಧೀರ್ ಕುಮಾರ್ ಅವರು, “ಓಎಂಪಿಎಲ್ ಅನ್ನು ಎಂಆರ್ ಪಿಎಲ್ ಜೊತೆಗೆ ವಿಲೀನ ಮಾಡಲಾಗಿದೆ. ನಮಗೆ 2022ರ ಡಿಸೆಂಬರ್ ತಿಂಗಳಲ್ಲಿ ಏಕರೂಪ ಸಂಬಳ ನೀಡಬೇಕೆಂದು ಎಂಆರ್ ಪಿಎಲ್ ಬೋರ್ಡ್ ಸ್ವತಂತ್ರ ನಿರ್ದೇಶಕರು ಆದೇಶವನ್ನು ಹೊರಡಿಸಿದ್ದಾರೆ. ಆದರೆ ಇಲ್ಲಿಯವರೆಗೂ ತಾರತಮ್ಯ ಧೋರಣೆ ಮುಂದುವರಿದಿದೆ. ಮೇಲಿನ ಅಧಿಕಾರಿಗಳು ಕೊಟ್ಟರೂ ಕೆಳಗಡೆ ಇರುವ ಹೆಚ್ ಆರ್ ವಿಭಾಗದ ಅಧಿಕಾರಿಗಳು ಕೊಡುತ್ತಿಲ್ಲ. ಆದಷ್ಟು ಬೇಗನೆ ಬಾಕಿ ವೇತನ ಪಾವತಿ ಮಾಡುವ ಜೊತೆಗೆ ಏಕರೂಪ ವೇತನ ಜಾರಿಯಾಗಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಂಪೆನಿ ಅಧಿಕಾರಿಗಳ ವಿರುದ್ಧ ಉಗ್ರ ಪ್ರತಿಭಟನೆ ನಡೆಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.
ಎಂಆರ್ ಪಿಎಲ್ ಅಧಿಕಾರಿಗಳ ವಿರುದ್ಧ ಇದು ಮೂರನೇ ಬಾರಿ ಉದ್ಯೋಗಿಗಳು ಪ್ರತಿಭಟನೆ ನಡೆಸುತ್ತಿದ್ದು ಈ ಹಿಂದೆಯೂ ನೀಡಿದ್ದ ಬೇಡಿಕೆಗಳನ್ನು ಈಡೇರಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಭೂ ನಿರ್ವಸಿತರಿಗೆ ಉದ್ಯೋಗ ಸಿಕ್ಕಿತು ಎಂದಾಗ ವೇತನ ಸಮಸ್ಯೆ ಎದುರಾಗಿದ್ದು ಅಧಿಕಾರಿಗಳು ಕೂಡಲೇ ಎಚ್ಚೆತ್ತು ಕ್ರಮ ಜರುಗಿಸಬೇಕಾದ ಅಗತ್ಯವಿದೆ.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…