ಸುರತ್ಕಲ್: ಕೈಗಾರಿಕೆ ಸ್ಥಾಪನೆ ಸಂದರ್ಭದಲ್ಲಿ ಭೂಮಿ ಕಳೆದುಕೊಂಡಿದ್ದ 293 ಮಂದಿ ನಿರ್ವಸಿತರಿಗೆ ಓಎಂಪಿಎಲ್ ಕಂಪೆನಿ ಕೆಪಿಟಿಯಲ್ಲಿ ತರಬೇತಿ ಕೊಟ್ಟು ಕೆಲಸಕ್ಕೆ ನೇಮಿಸಿಕೊಂಡಿತ್ತು. ಆದರೆ ಈಗ ಕಂಪೆನಿಯು ಎಂಆರ್ ಪಿಎಲ್ ಜೊತೆಗೆ ವಿಲೀನಗೊಂಡಿದ್ದರೂ ತಮಗೆ ವೇತನ ಪಾವತಿಯಲ್ಲಿ ಅಧಿಕಾರಿಗಳು ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಕಾರ್ಮಿಕರು ಎಂಆರ್ ಪಿ ಎಲ್ ಏರೊಮ್ಯಾಟಿಕ್ಸ್ ಕಾಂಪ್ಲೆಕ್ಸ್ ಎಂಪ್ಲಾಯಿಸ್ ಯೂನಿಯನ್ ಅಧ್ಯಕ್ಷ ಸುಧೀರ್ ಕುಮಾರ್ ನೇತೃತ್ವದಲ್ಲಿ ಎರಡು ದಿನಗಳ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕಾನ ಬಳಿ ಪ್ರತಿಭಟನೆ ನಡೆಸುತ್ತಿರುವ ಕಂಪೆನಿಯ ಕಾರ್ಮಿಕರು ತಮಗೆ ಉದ್ಯೋಗ ಭದ್ರತೆ ಜೊತೆಗೆ ವೇತನ ಪಾವತಿಯಲ್ಲಿ ತಾರತಮ್ಯ ಮಾಡದೇ ಏಕರೂಪ ವೇತನ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ಮಾತಾಡಿದ ಸುಧೀರ್ ಕುಮಾರ್ ಅವರು, “ಓಎಂಪಿಎಲ್ ಅನ್ನು ಎಂಆರ್ ಪಿಎಲ್ ಜೊತೆಗೆ ವಿಲೀನ ಮಾಡಲಾಗಿದೆ. ನಮಗೆ 2022ರ ಡಿಸೆಂಬರ್ ತಿಂಗಳಲ್ಲಿ ಏಕರೂಪ ಸಂಬಳ ನೀಡಬೇಕೆಂದು ಎಂಆರ್ ಪಿಎಲ್ ಬೋರ್ಡ್ ಸ್ವತಂತ್ರ ನಿರ್ದೇಶಕರು ಆದೇಶವನ್ನು ಹೊರಡಿಸಿದ್ದಾರೆ. ಆದರೆ ಇಲ್ಲಿಯವರೆಗೂ ತಾರತಮ್ಯ ಧೋರಣೆ ಮುಂದುವರಿದಿದೆ. ಮೇಲಿನ ಅಧಿಕಾರಿಗಳು ಕೊಟ್ಟರೂ ಕೆಳಗಡೆ ಇರುವ ಹೆಚ್ ಆರ್ ವಿಭಾಗದ ಅಧಿಕಾರಿಗಳು ಕೊಡುತ್ತಿಲ್ಲ. ಆದಷ್ಟು ಬೇಗನೆ ಬಾಕಿ ವೇತನ ಪಾವತಿ ಮಾಡುವ ಜೊತೆಗೆ ಏಕರೂಪ ವೇತನ ಜಾರಿಯಾಗಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಂಪೆನಿ ಅಧಿಕಾರಿಗಳ ವಿರುದ್ಧ ಉಗ್ರ ಪ್ರತಿಭಟನೆ ನಡೆಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.
ಎಂಆರ್ ಪಿಎಲ್ ಅಧಿಕಾರಿಗಳ ವಿರುದ್ಧ ಇದು ಮೂರನೇ ಬಾರಿ ಉದ್ಯೋಗಿಗಳು ಪ್ರತಿಭಟನೆ ನಡೆಸುತ್ತಿದ್ದು ಈ ಹಿಂದೆಯೂ ನೀಡಿದ್ದ ಬೇಡಿಕೆಗಳನ್ನು ಈಡೇರಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಭೂ ನಿರ್ವಸಿತರಿಗೆ ಉದ್ಯೋಗ ಸಿಕ್ಕಿತು ಎಂದಾಗ ವೇತನ ಸಮಸ್ಯೆ ಎದುರಾಗಿದ್ದು ಅಧಿಕಾರಿಗಳು ಕೂಡಲೇ ಎಚ್ಚೆತ್ತು ಕ್ರಮ ಜರುಗಿಸಬೇಕಾದ ಅಗತ್ಯವಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…