ಜನ ಮನದ ನಾಡಿ ಮಿಡಿತ

Advertisement

ಗುರುಪುರ ನದಿಗೆ ಹಾರಿ ಯುವಕ ಆತ್ಮಹತ್ಯೆ

ಬಜಪೆ:ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುಪುರ ಎಂಬಲ್ಲಿ ಶನಿವಾರದಂದು ನಡೆದಿದೆ.

ಕುಲಶೇಖರ ಬಳಿಯ ಕನ್ನಗುಡ್ಡೆ ನಿವಾಸಿ ಅಮರನಾಥ್ (36)ಮೃತ ದುರ್ಧೈವಿ. ಮೃತ ಯುವಕ ವೃತ್ತಿಯಲ್ಲಿ ಕಟ್ಟಡ ಕಾರ್ಮಿಕನಾಗಿದ್ದರು. ಊರ್ವಸ್ಟೋರ್ ನಿವಾಸಿಯಾಗಿದ್ದ ಅಮರ ನಾಥ್ ಕುಲಶೇಖರ ಕನ್ನಗುಡ್ಡೆ ಎಂಬಲ್ಲಿ ವಾಸವಿದ್ದರು.

ಶನಿವಾರ ಮಧ್ಯಾಹ್ನ ಅಮರನಾಥ್ ತನ್ನ ಬೈಕನ್ನು ಗುರುಪುರ ಸೇತುವೆಯ ಬದಿಯಲ್ಲಿ ನಿಲ್ಲಿಸಿ ನದಿಗೆ ಹಾರಿದ್ದನ್ನು ಸ್ಥಳೀಯರು ಗಮನಿಸಿ ಕೂಡಲೇ ಬಜಪೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಘಟನಾ ಸ್ಥಳಕ್ಕೆ ಆಗಮಿಸಿದ ಬಜಪೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಮುಳುಗು ತಜ್ಞರ ಸಹಾಯದಿಂದ ನದಿಯಲ್ಲಿ ಶೋಧ ಕಾರ್ಯ ನಡೆಸಿ ಪಡುಶೆಡ್ಡೆ ಎಂಬಲ್ಲಿ ಮೃತ ದೇಹವನ್ನು ಮೇಲಕ್ಕೆತ್ತಿದ್ದಾರೆ.


ಅಮರನಾಥ್ ಕಳೆದ ಏಳು ವರ್ಷಗಳಿಂದ ಮಾನಸಿಕ ಖಿನ್ನತೆ ಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!