ಜನ ಮನದ ನಾಡಿ ಮಿಡಿತ

Advertisement

ಗುರುಪುರ ನದಿಗೆ ಹಾರಿ ಯುವಕ ಆತ್ಮಹತ್ಯೆ

ಬಜಪೆ:ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುಪುರ ಎಂಬಲ್ಲಿ ಶನಿವಾರದಂದು ನಡೆದಿದೆ.

ಕುಲಶೇಖರ ಬಳಿಯ ಕನ್ನಗುಡ್ಡೆ ನಿವಾಸಿ ಅಮರನಾಥ್ (36)ಮೃತ ದುರ್ಧೈವಿ. ಮೃತ ಯುವಕ ವೃತ್ತಿಯಲ್ಲಿ ಕಟ್ಟಡ ಕಾರ್ಮಿಕನಾಗಿದ್ದರು. ಊರ್ವಸ್ಟೋರ್ ನಿವಾಸಿಯಾಗಿದ್ದ ಅಮರ ನಾಥ್ ಕುಲಶೇಖರ ಕನ್ನಗುಡ್ಡೆ ಎಂಬಲ್ಲಿ ವಾಸವಿದ್ದರು.

ಶನಿವಾರ ಮಧ್ಯಾಹ್ನ ಅಮರನಾಥ್ ತನ್ನ ಬೈಕನ್ನು ಗುರುಪುರ ಸೇತುವೆಯ ಬದಿಯಲ್ಲಿ ನಿಲ್ಲಿಸಿ ನದಿಗೆ ಹಾರಿದ್ದನ್ನು ಸ್ಥಳೀಯರು ಗಮನಿಸಿ ಕೂಡಲೇ ಬಜಪೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಘಟನಾ ಸ್ಥಳಕ್ಕೆ ಆಗಮಿಸಿದ ಬಜಪೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಮುಳುಗು ತಜ್ಞರ ಸಹಾಯದಿಂದ ನದಿಯಲ್ಲಿ ಶೋಧ ಕಾರ್ಯ ನಡೆಸಿ ಪಡುಶೆಡ್ಡೆ ಎಂಬಲ್ಲಿ ಮೃತ ದೇಹವನ್ನು ಮೇಲಕ್ಕೆತ್ತಿದ್ದಾರೆ.


ಅಮರನಾಥ್ ಕಳೆದ ಏಳು ವರ್ಷಗಳಿಂದ ಮಾನಸಿಕ ಖಿನ್ನತೆ ಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಪ್ರವಾಸಿ ಬಸ್ ಢಿ*ಕ್ಕಿ….!

ಉಡುಪಿ: ತಾಯಿ-ಮಗಳ ಹತ್ಯೆ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ….!

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ನಡುವೆ ಅಪ*ಘಾತ…!

ಹಾವೇರಿ: ನದಿಗೆ ಸ್ನಾನಕ್ಕೆ ಇಳಿಯುವ ಸಂದರ್ಭ ಕಾಲು ಜಾರಿ ವ್ಯಕ್ತಿ ಮೃತ್ಯು..!

ಗಾಜಿಯಾಬಾದ್: ಗಾಜಿಯಾಬಾದ್ ಅಪಾರ್ಟ್ಮೆಂಟ್‌ನಲ್ಲಿ ಭೀಕರ ಅಗ್ನಿ ಅವಘಡ..!

ಜಿಂಕೆ ಬೇಟೆಯಾಡುತ್ತಿದ್ದ ವೇಳೆಯೇ ಸಿಕ್ಕಿ ಬಿದ್ದ ಆರೋಪಿಗಳು…!

ಬೆಂಗಳೂರು: ಪ್ಲಾಸ್ಟಿಕ್ ಗೋಡೌನ್’ನಲ್ಲಿ ಸಂಭವಿಸಿದ ಅಗ್ನಿ ಅವಘಡ..!

ಜಕಾರ್ತಾ: ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪ*ಘಾತ..!

ಉಡುಪಿ: ಹೊಳೆಯಲ್ಲಿ ಮುಳುಗಿ ರಿಕ್ಷಾ ಚಾಲಕ ಮೃ*ತ್ಯು..!

error: Content is protected !!