ಉಡುಪಿ: ಬೆಂಗಳೂರಿನಲ್ಲಿ ಕಾಂಗ್ರೆಸ್ ನ ಮಾಜಿ ಕಾರ್ಪೊರೇಟರ್ ಮನೆಯಲ್ಲಿ 42 ಕೋಟಿ ಅಕ್ರಮ ಹಣ ಪತ್ತೆಯಾಗಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕೆಲಸ ಮಾಡುವುದನ್ನು ಬಿಟ್ಟು ಭ್ರಷ್ಟಾಚಾರದಲ್ಲಿ ತೊಡಗಿದೆ. ಭ್ರಷ್ಟಾಚಾರದಲ್ಲಿ ಸಂಗ್ರಹಿಸಿದ ಹಣವನ್ನು ಪಂಚರಾಜ್ಯಗಳ ಚುನಾವಣೆಗೆ ಬಳಸಲು ಉದ್ದೇಶಿಸಿತ್ತು ಎಂಬ ಸುದ್ದಿ ಹರಿದಾಡುತ್ತಿದೆ.
ಇದಕ್ಕೆ ಕಾಂಗ್ರೆಸ್ ಕೂಡಲೇ ಸ್ಪಷ್ಟೀಕರಣ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ, ಮಾಜಿ ಶಾಸಕ ರಘುಪತಿ ಭಟ್, ಮುಖಂಡರಾದ ಮಟ್ಟಾರು ರತ್ನಾಕರ ಹೆಗ್ಡೆ, ರವಿ ಅಮೀನ್, ಅಂಡಾರು ದೇವಿಪ್ರಸಾದ್ ಶೆಟ್ಟಿ, ಮಂಜುನಾಥ್ ಮಣಿಪಾಲ್, ದಾವೂದ್ ಅಬುಬಕ್ಕರ್, ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…