ಸಾಲೆತ್ತೂರು; ಸಾಲೆತ್ತೂರು ಗ್ರಾಮದ ಕೊಲ್ಲಾಡಿ ಶ್ರೀ ಧರ್ಮ ದೈವಗಳ ಪುನರುತ್ಥಾನದ ಬಗ್ಗೆ ಕೊಲ್ಲಾಡಿ ಶಾರದಾ ನಾರಾಯಣ ನಿಲಯದಲ್ಲಿ ಸಭೆ ನಡೆದಿದೆ.
ಸುಮಾರು 500ವರ್ಷಗಳಿಂದಲೂ ಪುರಾತನವಾಗಿ ಉತ್ತರದ ಕೊಡಿಯಲ್ ಗುತ್ತಿನಿಂದ ವಲಸೆ ಬಂದು ಸಾಲೆತ್ತೂರು ಗ್ರಾಮದ ಕೊಲ್ಲಾಡಿ ಎಂಬಲ್ಲಿ ನೆಲೆನಿಂತು ವಿಟ್ಲ ಅರಸರ ತುಂಡರಸರಾಗಿ ಊರಿನಲ್ಲಿ ಗೌರವದ ಸ್ಥಾನ ಹೊಂದಿದ ಕುಟುಂಬವಾಗಿತ್ತು ಎಂದು ಅಷ್ಟಮಂಗಲ ಪ್ರಶ್ನೆಯಲ್ಲಿ ತಿಳಿದು ಬಂದಿದೆ.
ಇದೀಗ ದೈವಾಗಳಾದ ನಾಗದೇವರು ರಕ್ತೇಶ್ವರಿ, ಜುಮಾದಿ ಬಂಟ, ಪಂಜುರ್ಲಿ ಕಲ್ಲುರ್ಟಿ ರಾಜನ್ ಗುಳಿಗವನ್ನೂ ಆರಾಧನೆ ಮಾಡಲು ದೈವಜ್ಞರು ಸೂಚಿಸಿದ ಹಿನ್ನೆಲೆಯಲ್ಲಿ ಸಮಿತಿ ರಚನೆ ಮತ್ತು ಇತರ ಕೆಲಸಗಳಿಗೆ ಸಭೆ ಕರೆಯಲಾಗಿದೆ. ಈ ಸಭೆಯ ಅಧ್ಯಕ್ಷತೆ ಕೊಲ್ಲಾಡಿ ರಾಮಯ್ಯ ಶೆಟ್ಟಿ ವಹಿಸಿದ್ದರು. ಶ್ರೀ ಸದಾಶಿವ ದೇವಸ್ಥಾನದ ಅರ್ಚಕರು ಮಾರ್ಗದರ್ಶಕರು ಆದ ವೇದಮೂರ್ತಿ ಶ್ರೀ ಭಾರ್ಗವ ಉಡುಪರು ಸಲಹೆ ಸೂಚನೆ ನೀಡಿದ್ದಾರೆ.
ಪ್ರಥಮ ಹಂತದ ಕಾಮಗಾರಿಗೆ ಚಾಲನೆ ನೀಡಲಾಯಿತು ಹಿರಿಯರಾದ ಕೊರಗಪ್ಪ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು ನೂತನ ಆಡಳಿತ ಟ್ರಸ್ಟ್ ರಚಿಸಲಾಯಿತು
ಈ ಸಂದರ್ಭದಲ್ಲಿ ಶೀನಪ್ಪ ಆಳ್ವಾ ಸದಾಶಿವ ದೇವಸ್ಥಾನದ ಟ್ರಸ್ಟಿ ಪಾಳ್ತಾಜೆ ದೇವಿದಾಸ ಶೆಟ್ಟಿ, ಬಾಲಕೃಷ್ಣ ರೈ ಕೃಷ್ಣಾ ಕಾಂಪ್ಲೆಕ್ಸ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕೊಲ್ಲಾಡಿ ಬಾಲಕೃಷ್ಣ ರೈ ಅವರು ನಿರೂಪಿಸಿದರು
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…