ಸಾಲೆತ್ತೂರು; ಸಾಲೆತ್ತೂರು ಗ್ರಾಮದ ಕೊಲ್ಲಾಡಿ ಶ್ರೀ ಧರ್ಮ ದೈವಗಳ ಪುನರುತ್ಥಾನದ ಬಗ್ಗೆ ಕೊಲ್ಲಾಡಿ ಶಾರದಾ ನಾರಾಯಣ ನಿಲಯದಲ್ಲಿ ಸಭೆ ನಡೆದಿದೆ.
ಸುಮಾರು 500ವರ್ಷಗಳಿಂದಲೂ ಪುರಾತನವಾಗಿ ಉತ್ತರದ ಕೊಡಿಯಲ್ ಗುತ್ತಿನಿಂದ ವಲಸೆ ಬಂದು ಸಾಲೆತ್ತೂರು ಗ್ರಾಮದ ಕೊಲ್ಲಾಡಿ ಎಂಬಲ್ಲಿ ನೆಲೆನಿಂತು ವಿಟ್ಲ ಅರಸರ ತುಂಡರಸರಾಗಿ ಊರಿನಲ್ಲಿ ಗೌರವದ ಸ್ಥಾನ ಹೊಂದಿದ ಕುಟುಂಬವಾಗಿತ್ತು ಎಂದು ಅಷ್ಟಮಂಗಲ ಪ್ರಶ್ನೆಯಲ್ಲಿ ತಿಳಿದು ಬಂದಿದೆ.
ಇದೀಗ ದೈವಾಗಳಾದ ನಾಗದೇವರು ರಕ್ತೇಶ್ವರಿ, ಜುಮಾದಿ ಬಂಟ, ಪಂಜುರ್ಲಿ ಕಲ್ಲುರ್ಟಿ ರಾಜನ್ ಗುಳಿಗವನ್ನೂ ಆರಾಧನೆ ಮಾಡಲು ದೈವಜ್ಞರು ಸೂಚಿಸಿದ ಹಿನ್ನೆಲೆಯಲ್ಲಿ ಸಮಿತಿ ರಚನೆ ಮತ್ತು ಇತರ ಕೆಲಸಗಳಿಗೆ ಸಭೆ ಕರೆಯಲಾಗಿದೆ. ಈ ಸಭೆಯ ಅಧ್ಯಕ್ಷತೆ ಕೊಲ್ಲಾಡಿ ರಾಮಯ್ಯ ಶೆಟ್ಟಿ ವಹಿಸಿದ್ದರು. ಶ್ರೀ ಸದಾಶಿವ ದೇವಸ್ಥಾನದ ಅರ್ಚಕರು ಮಾರ್ಗದರ್ಶಕರು ಆದ ವೇದಮೂರ್ತಿ ಶ್ರೀ ಭಾರ್ಗವ ಉಡುಪರು ಸಲಹೆ ಸೂಚನೆ ನೀಡಿದ್ದಾರೆ.
ಪ್ರಥಮ ಹಂತದ ಕಾಮಗಾರಿಗೆ ಚಾಲನೆ ನೀಡಲಾಯಿತು ಹಿರಿಯರಾದ ಕೊರಗಪ್ಪ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು ನೂತನ ಆಡಳಿತ ಟ್ರಸ್ಟ್ ರಚಿಸಲಾಯಿತು
ಈ ಸಂದರ್ಭದಲ್ಲಿ ಶೀನಪ್ಪ ಆಳ್ವಾ ಸದಾಶಿವ ದೇವಸ್ಥಾನದ ಟ್ರಸ್ಟಿ ಪಾಳ್ತಾಜೆ ದೇವಿದಾಸ ಶೆಟ್ಟಿ, ಬಾಲಕೃಷ್ಣ ರೈ ಕೃಷ್ಣಾ ಕಾಂಪ್ಲೆಕ್ಸ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕೊಲ್ಲಾಡಿ ಬಾಲಕೃಷ್ಣ ರೈ ಅವರು ನಿರೂಪಿಸಿದರು
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…