ಮೂಡುಬಿದಿರೆ ತಾಲೂಕಿನ ವಾಲ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2024-25 ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಉದ್ದೇಶದಿಂದ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಹಾಗೂ ಮನೆ ಮನೆ ಜಾಥಾ ಕಾರ್ಯಕ್ರಮಕ್ಕೆ ಅ. 13 ರಂದು ಅಳಿಯೂರು ಹೈಸ್ಕೂಲ್ ಬಳಿ ಪಂಚಾಯತ್ ಅಧ್ಯಕ್ಷರಾದ ವಿಶಾಲಾಕ್ಷಿ ಅವರು ಚಾಲನೆ ನೀಡಿದರು.
ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೈಸ್ಕೂಲ್ ಬಳಿ ಸೇರಿರುವ ಜನರಿಗೆ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಕಾಮಗಾರಿ ಅನುಷ್ಠಾನಕ್ಕೆ ಒಂದು ಸದಾವಕಾಶ, ಕ್ರಿಯಾಯೋಜನೆ ತಯಾರಿ ಕೆಲಸ ನಡೆಯುತ್ತಿದ್ದು, ಕೂಡಲೇ ಅರ್ಜಿ ಸಲ್ಲಿಸಿ ಎಂದು ತಾಲೂಕು ಐಇಸಿ ಸಂಯೋಜಕಿಯವರಾದ ಅನ್ವಯ ಮಾಹಿತಿ ನೀಡಿದರು.
ಮನೆಯಲ್ಲಿ ದಿನನಿತ್ಯದ ಚಟುವಟಿಕೆಗಳಿಂದ ಬರುವ ಕೊಳಚೆ ನೀರನ್ನು ಇಂಗಿಸಲು ನರೇಗಾ ಯೋಜನೆಯಡಿಯಲ್ಲಿ ಬಚ್ಚಲು ಗುಂಡಿ ಮಾಡಿಸಿಕೊಳ್ಳಿ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಉಗ್ಗಪ್ಪ ಮೂಲ್ಯ ಅವರು ಸಲಹೆ ನೀಡಿದರು.
ಬಳಿಕ ಮನೆ – ಮನೆ ಭೇಟಿ ನೀಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿ ಮಾಹಿತಿಯನ್ನು ಒಳಗೊಂಡ ಕರಪತ್ರವನ್ನು ಹಂಚಲಾಯಿತು.
ಸ್ವಚ್ಚತಾ ವಾಹನದಲ್ಲಿ ಧ್ವನಿ ವರ್ಧಕದ ಮೂಲಕ ಗ್ರಾಮದ ಪ್ರತಿ ವಾರ್ಡಿನಲ್ಲಿ ಮಾಹಿತಿ ಪ್ರಚಾರ ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಪಂಚಾಯತ್ ಕಾರ್ಯದರ್ಶಿ ಶೇಖರ್, ಗ್ರಾಮ ಪಂಚಾಯತಿ ಸಿಬ್ಬಂದಿಗಳಾದ ಪ್ರಿಯಾ, ಸಂದೀಪ್ , ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…