ಹಳೆಯಂಗಡಿ : ಪ್ರತಿಯೊಂದು ಚರ್ಚ್ ಗಳು ಆಯೋಜಿಸುತ್ತಿರುವ ಪಂದ್ಯಾಟಗಳು ಸಭೆಯ ಹಾಗೂ ಕುಟುಂಬಗಳ ಅನ್ಯೋನ್ಯತೆಗೆ ಪೂರಕವಾಗಿ ಇದ್ದು, ಸಭೆಗಳಲ್ಲಿ ಉತ್ತಮ ವಾತಾವರಣವನ್ನು ಸೃಷ್ಟಿ ಮಾಡಲು ಕಾರಣವಾಗಿದೆ ಎಂದು ಮಂಗಳೂರಿನ ಅಥೇನ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಆದ ಡಾ. ಅಶಿತ್ ಶೆಟ್ಟಿಯನ್ ನುಡಿದರು.
ಅವರು ಹಳೆಯಂಗಡಿ ಸಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚ್ ವತಿಯಿಂದ ನಡೆದ ಸುಗ್ಗಿ ಹಬ್ಬದ ಪಂದ್ಯಾಟದ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚಿನ ಸಭಾ ಪಾಲಕರಾದ ರೆವೆರೆಂಡ್ ಅಮೃತ್ ರಾಜ್ ಖೊಡೆ ರವರು ವಹಿಸಿ ಶುಭ ಹಾರೈಸಿದರು.
ಸಿಎಸ್ಐ ಕ್ರಿಸ್ತ ಕಾಂತಿ ಚರ್ಚ್ ಪಣಂಬೂರು ಇಲ್ಲಿಯ ಸಭಾ ಪಾಲಕರಾದ ರೆವೆರೆಂಡ್ ಸಂಧ್ಯಾ ಖೊಡೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಭಾ ಪರಿಪಾಲನ ಸಮಿತಿಯ ಸದಸ್ಯರಾದ ಆಸ್ಟಿನ್ ಕರ್ಕಡ, ವಸಂತ ಬೆರ್ನಾಡ್,
ಲಾವಣ್ಯ ಕೋಟ್ಯಾನ್, ಶರ್ಲಿ ಬಂಗೇರ, ಜೇಮ್ಸ್ ಕರ್ಕಡ, ಮತ್ತು ಸಿಡ್ನಿ ಕರ್ಕಡ ಉಪಸ್ಥಿರಿದ್ದರು.
ಪಂದ್ಯಾಟ ಸಮಿತಿಯ ಕಾರ್ಯದರ್ಶಿ ರೆಮ್ಮಿ ಎಲಿಸಾ ಸಾಮುವೆಲ್, ಸ್ವಾಗತಿಸಿ ಖಜಾಂಜಿ ಸುಹಾನ್ ಪಾಲನ್ನ ವಂದಿಸಿದರು. ಅಡ್ಲಿನ್ ನವ್ಯ ಪಾಲನ್ನ ಕಾರ್ಯಕ್ರಮ ನಿರೂಪಿಸಿದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…