ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯ ವೇಳೆ ಕಾಂಗ್ರೆಸ್ ಬೆಂಬಲಿತ ಗುತ್ತಿಗೆದಾರನ ಮನೆಯಲ್ಲಿ 42 ಕೋಟಿ ಅಕ್ರಮ ಹಣ ಪತ್ತೆಯಾಗಿದ್ದು, ಇದನ್ನು ಖಂಡಿಸಿ ಹಾಗೂ ರಾಜ್ಯ ಕಾಂಗ್ರೆಸ್ ಸರಕಾರದ ಪೊಳ್ಳು ಭರವಸೆ ನೀಡಿ ಹಾದಿ ತಪ್ಪಿಸುವ ನೀತಿಯನ್ನು ವಿರೋಧಿಸಿ ಇಂದು ಬಿಜೆಪಿ ಮೂಲ್ಕಿ – ಮೂಡುಬಿದಿರೆ ಮಂಡಲ ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿದರು.

ಕರ್ನಾಟಕವನ್ನು ಏಟಿಎಂ ಆಗಿ ಮಾಡಿಕೊಂಡಿರುವ ಕಾಂಗ್ರೆಸ್ ಹೈಕಮಂಡ್ ಈ ಹಣವನ್ನು ತೆಲಂಗಾಣದ ಚುನಾವಣೆಗೆ ಈ ಹಣ ಬಳಸಲು ಉದ್ದೇಶಿಸಲಾಗಿತ್ತು ಎಂಬ ಸುದ್ದಿಗೆ ಕಾಂಗ್ರೆಸ್ ಸ್ಪಷ್ಟೀಕರಣ ನೀಡಬೇಕು ಹಾಗೂ ಇಂತಹ ಭ್ರಷ್ಟ ಆಡಳಿತ ನೀಡುತ್ತಿರುವ ಸಿಎಂ ಮತ್ತು ಡಿಸಿಎಂ ಇಬ್ಬರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಈ ಸಂದರ್ಭದಲ್ಲಿ ಅಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀ ಸುನಿಲ್ ಆಳ್ವ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷರಾದ ಈಶ್ವರ್ ಕಟೀಲ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ್ ಶೆಟ್ಟಿಗಾರ್ ಮತ್ತು ಕೇಶವ ಕರ್ಕೇರ ಸೇರಿದಂತೆ ಪ್ರಮುಖರು ಮುಖಂಡರು ಉಪಸ್ಥಿತರಿದ್ದರು.



