ದಕ್ಷಿಣ ಕನ್ನಡ : ಅರಬ್ಬಿ ಸಮುದ್ರದ ಕರಾವಳಿ ತೀರದ ಸಮೀಪ ಚಂಡಮಾರುತ ರೂಪುಗೊಂಡಿದ್ದು, ಕಡಲ ನಗರಿ ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ಮಳೆಯಾಗುತ್ತಿದ್ದು, ಮೋಡ ಮುಸುಕಿದ ವಾತಾವರಣವಿದೆ, ಕಳೆದೆರಡು ದಿನಗಳಿಂದ ಕರಾವಳಿಯ ಬಹುತೇಕ ಕಡೆಗಳಲ್ಲಿ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗುತ್ತಿದ್ದು, ಕರಾವಳಿಯ ಹಲವು ಜಿಲ್ಲೆಗಳಲ್ಲಿ, ಸಿಡಿಲಿನ ಆಘಾತದಿಂದ ಹಾನಿಯಾದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ, ಹಲವು ಮನೆ ಕೊಟ್ಟಿಗೆಗಳು ಸಿಡಿಲಿನಿಂದ ಹಾನಿಯಾಗಿವೆ, ಇಂದು ಕೂಡ ಸಂಜೆಯ ವೇಳೆಗೆ ಉತ್ತಮ ಮಳೆಯಾಗುತ್ತಿದೆ ಎಂದು ವರದಿಯಾಗಿದೆ.
ಅರಬ್ಬಿ ಸಮುದ್ರದ ಆಗ್ನೇಯ ಹಾಗೂ ಪೂರ್ವ-ಕೇಂದ್ರ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ಪಶ್ಚಿಮ ಮತ್ತು ವಾಯವ್ಯ ಪ್ರದೇಶದತ್ತ ಸಾಗಿ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಾವಿಕರು, ಮೀನುಗಾರರು ಮುನ್ನೆಚ್ಚರಿಕೆ ವಹಿಸಬೇಕು ಎಂದು ನಮ ಮಂಗಳೂರು ಬಂದರು ಪ್ರಾಧಿಕಾರ ತಿಳಿಸಿದೆ.
ಮುನ್ಸೂಚನೆಯಂತೆ ಚಂಡಮಾರುತ ಉಂಟಾಗಿದ್ದೇ ಆದರೆ ಬಂದರಿನ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸುವ ಸಾಧ್ಯತೆಯಿದ್ದು, ಹಡಗುಗಳು ಸಾಕಷ್ಟು ಮುಂಚಿತವಾಗಿ ದಡ ಸೇರುವಂತೆ ಸೂಚಿಸಲಾಗಿದೆ, ಬಂದರಿನ ಎಲ್ಲಾ ಕಾರ್ಯಾಚರಣೆಗಳು ರದ್ದಾಗುವ ಪರಿಸ್ಥಿತಿ ಉಂಟಾದರೆ ಅದನ್ನು ಎದುರಿಸಲು ಸಿದ್ಧರಾಗಿರಬೇಕು ಎಂದು ಬಂದರಿನ ಬಳಕೆದಾರರು, ಹಡಗು ಸಂಸ್ಥೆಗಳು, ಅರಬ್ಬಿ ಸಮುದ್ರಕ್ಕೆ ಹೊಂದಿಕೊಂಡಂತಿರುವ ಜಿಲ್ಲಾಡಳಿತಗಳು, ಮೀನುಗಾರಿಕಾ ಇಲಾಖೆ, ಕರಾವಳಿ ಭದ್ರತಾ ಪೊಲೀಸ್ ಹಾಗೂ ಕಸ್ಟಮ್ಸ್ ಇಲಾಖೆಗಳಿಗೆ ಮುನ್ನೆಚ್ಚರಿಕೆ ಸಂದೇಶ ರವಾನಿಸಿದೆ. ಮಾಧ್ಯಮದಲ್ಲಿ ವರದಿಯಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…