ದಕ್ಷಿಣ ಕನ್ನಡ : ಅರಬ್ಬಿ ಸಮುದ್ರದ ಕರಾವಳಿ ತೀರದ ಸಮೀಪ ಚಂಡಮಾರುತ ರೂಪುಗೊಂಡಿದ್ದು, ಕಡಲ ನಗರಿ ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ಮಳೆಯಾಗುತ್ತಿದ್ದು, ಮೋಡ ಮುಸುಕಿದ ವಾತಾವರಣವಿದೆ, ಕಳೆದೆರಡು ದಿನಗಳಿಂದ ಕರಾವಳಿಯ ಬಹುತೇಕ ಕಡೆಗಳಲ್ಲಿ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗುತ್ತಿದ್ದು, ಕರಾವಳಿಯ ಹಲವು ಜಿಲ್ಲೆಗಳಲ್ಲಿ, ಸಿಡಿಲಿನ ಆಘಾತದಿಂದ ಹಾನಿಯಾದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ, ಹಲವು ಮನೆ ಕೊಟ್ಟಿಗೆಗಳು ಸಿಡಿಲಿನಿಂದ ಹಾನಿಯಾಗಿವೆ, ಇಂದು ಕೂಡ ಸಂಜೆಯ ವೇಳೆಗೆ ಉತ್ತಮ ಮಳೆಯಾಗುತ್ತಿದೆ ಎಂದು ವರದಿಯಾಗಿದೆ.
ಅರಬ್ಬಿ ಸಮುದ್ರದ ಆಗ್ನೇಯ ಹಾಗೂ ಪೂರ್ವ-ಕೇಂದ್ರ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ಪಶ್ಚಿಮ ಮತ್ತು ವಾಯವ್ಯ ಪ್ರದೇಶದತ್ತ ಸಾಗಿ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಾವಿಕರು, ಮೀನುಗಾರರು ಮುನ್ನೆಚ್ಚರಿಕೆ ವಹಿಸಬೇಕು ಎಂದು ನಮ ಮಂಗಳೂರು ಬಂದರು ಪ್ರಾಧಿಕಾರ ತಿಳಿಸಿದೆ.
ಮುನ್ಸೂಚನೆಯಂತೆ ಚಂಡಮಾರುತ ಉಂಟಾಗಿದ್ದೇ ಆದರೆ ಬಂದರಿನ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸುವ ಸಾಧ್ಯತೆಯಿದ್ದು, ಹಡಗುಗಳು ಸಾಕಷ್ಟು ಮುಂಚಿತವಾಗಿ ದಡ ಸೇರುವಂತೆ ಸೂಚಿಸಲಾಗಿದೆ, ಬಂದರಿನ ಎಲ್ಲಾ ಕಾರ್ಯಾಚರಣೆಗಳು ರದ್ದಾಗುವ ಪರಿಸ್ಥಿತಿ ಉಂಟಾದರೆ ಅದನ್ನು ಎದುರಿಸಲು ಸಿದ್ಧರಾಗಿರಬೇಕು ಎಂದು ಬಂದರಿನ ಬಳಕೆದಾರರು, ಹಡಗು ಸಂಸ್ಥೆಗಳು, ಅರಬ್ಬಿ ಸಮುದ್ರಕ್ಕೆ ಹೊಂದಿಕೊಂಡಂತಿರುವ ಜಿಲ್ಲಾಡಳಿತಗಳು, ಮೀನುಗಾರಿಕಾ ಇಲಾಖೆ, ಕರಾವಳಿ ಭದ್ರತಾ ಪೊಲೀಸ್ ಹಾಗೂ ಕಸ್ಟಮ್ಸ್ ಇಲಾಖೆಗಳಿಗೆ ಮುನ್ನೆಚ್ಚರಿಕೆ ಸಂದೇಶ ರವಾನಿಸಿದೆ. ಮಾಧ್ಯಮದಲ್ಲಿ ವರದಿಯಾಗಿದೆ.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…