“ಮಕ್ಕಳ ಕಲಾಲೋಕ” ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕ ಇದರ 17ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು 2023ರ ದಶಂಬರ್ ಮೊದಲ ವಾರದಲ್ಲಿ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಕಡೇಶ್ವಾಲ್ಯದ ಸಹಭಾಗಿತ್ವದಲ್ಲಿ ನೆರವೇರಲಿದ್ದು, ಬಂಟ್ವಾಳ ತಾಲೂಕಿನಲ್ಲಿ 18ವರ್ಷ ಪ್ರಾಯದೊಳಗಿನ ಮಕ್ಕಳಿರುವ ಸರಕಾರಿ, ಅನುದಾನಿತ , ಅನುದಾನ ರಹಿತ ವಿದ್ಯಾಸಂಸ್ಥೆಗಳಲ್ಲಿ ಐದು ವರ್ಷಗಳ ಈಚೆಗೆ ಸಾಹಿತ್ಯ ಹಾಗೂ ಇತರ ಕಲೆಗಳಲ್ಲಿ ಮಾಡಿದ ಸಾಧನೆಗಳ ವಿವರಗಳನ್ನು ಬರೆದು ಕಳುಹಿಸಿರಿ.
ಆಯ್ದ ಒಂದು ವಿದ್ಯಾಸಂಸ್ಥೆಗೆ “ಸಾಹಿತ್ಯ ತಾರೆ” ಪ್ರಶಸ್ತಿಯನ್ನು ನೀಡಲಾಗುವುದು. ಮಕ್ಕಳಿಗಾಗಿ ಸಾಹಿತ್ಯ ಹಾಗೂ ವಿವಿಧ ಕಲೆಗಳಲ್ಲಿ ಸಹಕರಿಸುತ್ತಿರುವ ಶಿಕ್ಷಕರು ಅಥವಾ ಸಾರ್ವಜನಿಕ ಕಲಾಗಾರರ ಸಾಧನೆಗಳ ವಿವರಗಳನ್ನು ಪಟ್ಟಿ ಮಾಡಿ ಕಳುಹಿಸಿರಿ. ಆಯ್ದ ಸಾಧಕರೊಬ್ಬರಿಗೆ “ಬಾಲ ಬಂಧು” ಪ್ರಶಸ್ತಿ ನೀಡಿ ಗೌರವಿಸಲಾಗುವುದು. ವಿವರಗಳನ್ನು 2023 ಅಕ್ಟೋಬರ್ 25ರೊಳಗೆ ಕೆಳಗಿನ ವಿಳಾಸಕ್ಕೆ ತಲುಪಿಸಬೇಕೆಂದು “ಮಕ್ಕಳ ಕಲಾ ಲೋಕ”ದ ಅಧ್ಯಕ್ಷರಾದ ರಮೇಶ ಎಂ. ಬಾಯಾರು ಪ್ರಕಟಣೆಯಲ್ಲಿ ತಿಳಿಸಿರುವರು.
ಅಧ್ಯಕ್ಷರು. “ಮಕ್ಕಳ ಕಲಾ ಲೋಕ” -ಸ್ಕಂದ- ಅಳಕೆ ಮಜಲು 574243. ಮೊ: 9448626093
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…