“ಮಕ್ಕಳ ಕಲಾಲೋಕ” ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕ ಇದರ 17ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು 2023ರ ದಶಂಬರ್ ಮೊದಲ ವಾರದಲ್ಲಿ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಕಡೇಶ್ವಾಲ್ಯದ ಸಹಭಾಗಿತ್ವದಲ್ಲಿ ನೆರವೇರಲಿದ್ದು, ಬಂಟ್ವಾಳ ತಾಲೂಕಿನಲ್ಲಿ 18ವರ್ಷ ಪ್ರಾಯದೊಳಗಿನ ಮಕ್ಕಳಿರುವ ಸರಕಾರಿ, ಅನುದಾನಿತ , ಅನುದಾನ ರಹಿತ ವಿದ್ಯಾಸಂಸ್ಥೆಗಳಲ್ಲಿ ಐದು ವರ್ಷಗಳ ಈಚೆಗೆ ಸಾಹಿತ್ಯ ಹಾಗೂ ಇತರ ಕಲೆಗಳಲ್ಲಿ ಮಾಡಿದ ಸಾಧನೆಗಳ ವಿವರಗಳನ್ನು ಬರೆದು ಕಳುಹಿಸಿರಿ.
ಆಯ್ದ ಒಂದು ವಿದ್ಯಾಸಂಸ್ಥೆಗೆ “ಸಾಹಿತ್ಯ ತಾರೆ” ಪ್ರಶಸ್ತಿಯನ್ನು ನೀಡಲಾಗುವುದು. ಮಕ್ಕಳಿಗಾಗಿ ಸಾಹಿತ್ಯ ಹಾಗೂ ವಿವಿಧ ಕಲೆಗಳಲ್ಲಿ ಸಹಕರಿಸುತ್ತಿರುವ ಶಿಕ್ಷಕರು ಅಥವಾ ಸಾರ್ವಜನಿಕ ಕಲಾಗಾರರ ಸಾಧನೆಗಳ ವಿವರಗಳನ್ನು ಪಟ್ಟಿ ಮಾಡಿ ಕಳುಹಿಸಿರಿ. ಆಯ್ದ ಸಾಧಕರೊಬ್ಬರಿಗೆ “ಬಾಲ ಬಂಧು” ಪ್ರಶಸ್ತಿ ನೀಡಿ ಗೌರವಿಸಲಾಗುವುದು. ವಿವರಗಳನ್ನು 2023 ಅಕ್ಟೋಬರ್ 25ರೊಳಗೆ ಕೆಳಗಿನ ವಿಳಾಸಕ್ಕೆ ತಲುಪಿಸಬೇಕೆಂದು “ಮಕ್ಕಳ ಕಲಾ ಲೋಕ”ದ ಅಧ್ಯಕ್ಷರಾದ ರಮೇಶ ಎಂ. ಬಾಯಾರು ಪ್ರಕಟಣೆಯಲ್ಲಿ ತಿಳಿಸಿರುವರು.
ಅಧ್ಯಕ್ಷರು. “ಮಕ್ಕಳ ಕಲಾ ಲೋಕ” -ಸ್ಕಂದ- ಅಳಕೆ ಮಜಲು 574243. ಮೊ: 9448626093
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…