ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು, ತಾಲೂಕು ಪಂಚಾಯತ್ ಮೂಡುಬಿದಿರೆ, ನೆಹರು ಯುವ ಕೆಂದ್ರ ಮಂಗಳೂರು ಹಾಗೂ ಅಂಚೆ ಇಲಾಖೆ ಇದರ ಸಹಯೋಗದೊಂದಿಗೆ ನನ್ನ ಮಣ್ಣು ನನ್ನ ದೇಶ ಅಮೃತ ಕಳಶ ಯಾತ್ರೆ ಕಾರ್ಯಕ್ರಮವು ಅ. 17 ರಂದು ತಾಲೂಕು ಪಂಚಾಯತ್ ನಲ್ಲಿ ಹಮ್ಮಿಕೊಳ್ಳಲಾಯಿತು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲೋಕೇಶ್ ಸಿ. ಅವರು ಮಾತನಾಡಿ, ರಾಷ್ಟ್ರವನ್ನು ಕಟ್ಟುವ ಯುವಜನತೆ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಸಮಾಜದಲ್ಲಿ ವಿದ್ಯಾರ್ಥಿಗಳ ಪಾತ್ರ ಹೆಚ್ಚಿದ್ದು, ಎಲ್ಲರೂ ಜವಾಬ್ದಾರಿಯುತ ಕೆಲಸಗಳಲ್ಲಿ ಕಾಣಿಸಿಕೊಳ್ಳಬೇಕು. ಪ್ರಜಾಪ್ರಭುತ್ವದ ಮೂಲ ಎಂದರೆ ಅದು ಗ್ರಾಮ ಪಂಚಾಯತ್ ಹೀಗಾಗಿ ಮೂಡುಬಿದಿರೆ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಒಟ್ಟು 12 ಗ್ರಾಮ ಪಂಚಾಯತ್ಗಳ ಬೆಂಬಲದಿಂದ ನೆಲದ ಪವಿತ್ರ ಮಣ್ಣನ್ನು ಸಂಗ್ರಹಿಸಲಾಗಿದೆ ಎಂದರು.
ಇದೇ ವೇಳೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಬಳಿಕ ನೆಹರು ಯುವ ಕೇಂದ್ರದ ತಾಲೂಕು ಸಂಯೋಜಕರಾದ ವೈಷ್ಣವ್ ಹೆಗ್ಡೆ ಇವರಿಗೆ ಪವಿತ್ರ ಮಣ್ಣು ತುಂಬಿದ ಅಮೃತ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಉಪ ಅಂಚೆ ನಿರೀಕ್ಷಕರಾದ ಪ್ರಹ್ಲಾದ್ ನಾಯಕ್ ಹಾಗೂ ಅಂಚೆ ಇಲಾಖಾ ಸಿಬ್ಬಂದಿಗಳು, ಆಳ್ವಾಸ್ ಕಾಲೇಜಿನ ಎನ್ಎಸ್ಎಸ್ ಘಟಕದ ಸಂಯೋಜಕರಾದ ವಸಂತ್, ತಾ.ಪಂ. ಪ್ರಧಾನ ವ್ಯವಸ್ಥಾಪಕರಾದ ವಸಂತ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಕಾರ್ಯದರ್ಶಿಗಳು, ಪಂಚಾಯತ್ ಸಿಬ್ಬಂದಿಗಳು ಹಾಗೂ ತಾಲೂಕು ಪಂಚಾಯತ್ ಸಿಬ್ಬಂದಿಗಳು, ಆಳ್ವಾಸ್ ಕಾಲೇಜು ಎನ್ ಎಸ್ ಎಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…